ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ನಾವೇ ಅಧಿಕಾರಕ್ಕೆ: ಬಿಎಸ್‌ವೈ

Last Updated 27 ಆಗಸ್ಟ್ 2022, 19:28 IST
ಅಕ್ಷರ ಗಾತ್ರ

ಕೆ.ಆರ್.ಪುರ: ‘140ಕ್ಕೂ ಹೆಚ್ಚು ಸೀಟ್ ಗೆಲ್ಲುವ ಮೂಲಕ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಮಹಿಳಾ ಮುಖಂಡರಿಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ನೇತೃತ್ವದಲ್ಲಿ ಮಹಿಳೆಯರಿಗೆ ಸೀರೆ, ಅರಿಶಿನ, ಕುಂಕುಮ, ಬಳೆಯೊಂದಿಗೆ ಬಾಗಿನ ಅರ್ಪಿಸಿ ಮಾತನಾಡಿದರು.

ರಾಜ್ಯದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಎಲ್ಲರೂ ಒಟ್ಟಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು.

‘ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಅವರಿಗೆ ಆಗಾಗ ರಾಜ್ಯಕ್ಕೆ ಬರುವಂತೆ ಮನವಿ ಮಾಡಿದ್ದೇನೆ. ತಿಂಗಳಿಗೊಮ್ಮೆ ಯಾವುದಾದರೂ ಕಾರ್ಯಕ್ರಮಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ. ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ನರೇಂದ್ರ ಮೋದಿಗೆ ಆಹ್ವಾನ ನೀಡಿದ್ದೇವೆ. ಸಮಾವೇಶಕ್ಕೆ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಮಾಡಲು ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ' ಎಂದು ಹೇಳಿದರು.

ಶೇ 40 ಕಮಿಷನ್ ಆರೋಪ ಸುಳ್ಳು, ಕಮಿಷನ್ ಬಗ್ಗೆ ಮೂರ್ಖರು ಮಾತನಾಡುತ್ತಾರೆ. ಯಾರೋ ಒಬ್ಬನಿಗೆ ಹೇಳಿಕೊಟ್ಟು ಸುಳ್ಳು ಆರೋಪ ಮಾಡಿಸುತ್ತಿದ್ದಾರೆ ಎಂದು ಹೇಳಿದರು.

ಸಚಿವ ಬೈರತಿ ಬಸವರಾಜ ಮಾತನಾಡಿ, ಬಾಗಿನ ಕಾರ್ಯಕ್ರಮ ಚುನಾವಣೆಗಾಗಿ ಮಾಡಿರುವ ಕಾರ್ಯಕ್ರಮ ಅಲ್ಲ ಎಂದರು.

ರಾಜ್ಯ ಬಿಜೆಪಿ ಮಹಿಳಾ ಅಧ್ಯಕ್ಷೆ ಗೀತಾ ವಿವೇಕಾನಂದ, ನಗರ ಉತ್ತರ ಜಿಲ್ಲಾ ಅಧ್ಯಕ್ಷೆ ಆಶಾರಾವ್, ಕೆ.ಆರ್.ಪುರ ಮಹಿಳಾ ಅಧ್ಯಕ್ಷೆ ಮಂಜುಳಾದೇವಿ, ಮಾಜಿ ಪಾಲಿಕೆ ಸದಸ್ಯರಾದ ಜಯಪ್ರಕಾಶ್, ಶ್ರೀಕಾಂತ್, ಎಸ್.ಜಿ.ನಾಗರಾಜ್, ಸುರೇಶ್, ಅಂತೋಣಿ ಸ್ವಾಮಿ, ಮೇಡಹಳ್ಳಿ ಕೃಷ್ಣಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT