ಕಾಂಗ್ರೆಸ್'ನಲ್ಲಿ ಒಗ್ಗಟ್ಟು ಇಲ್ಲದೆ ಇಬ್ಭಾಗವಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುವೆ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಟ ನಡೆದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ತುಷ್ಟೀಕರಣ, ಜಾತಿಗಳ ನಡುವೆ ಒಡೆದಾಡುವ ರಾಜಕಾರಣ ಮಾಡಿದ್ದರು. ಇದರಿಂದಾಗಿ ಅವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ. ಕೇಂದ್ರದ ಕಾಂಗ್ರೆಸ್ ನಾಯಕರು ಸಹ ವಿಫಲರಾಗಿದ್ದಾರೆ. ಅವರಿಂದ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಯಾವುದೇ ಸ್ಫೂರ್ತಿ ಸಿಗುತ್ತಿಲ್ಲ. ರಾಹುಲ್ ಗಾಂಧಿ ಮಾತನಾಡಿದರೆ, ಕಾಂಗ್ರೆಸ್'ಗೆ ಸಿಗುವ ಮತವೂ ಕಳೆದುಹೋಗುತ್ತದೆ ಎಂದು ವ್ಯಂಗ್ಯವಾಡಿದರು.