ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಮೃತರಾದವರ ಮನೆಗಳಿಗೆ ಬಿಜೆಪಿ ವತಿಯಿಂದ ಭೇಟಿ: ಕಟೀಲ್

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ
Last Updated 14 ಜುಲೈ 2021, 12:45 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯದಲ್ಲಿಕೋವಿಡ್‌ನಿಂದಮೃತಪಟ್ಟ ಎಲ್ಲರ ಮನೆಗಳಿಗೆ ಪಕ್ಷದ ವತಿಯಿಂದ ಭೇಟಿ ನೀಡುವ ಬಗ್ಗೆ ಯೋಚನೆ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ಪಕ್ಷದ ಪದಾಧಿಕಾರಿಗಳು ಮೃತಪಟ್ಟವರ ಕುಟುಂಬಗಳನ್ನು ಗುರುತಿಸಿ ಸಾಂತ್ವನ ಹೇಳುವ ಜೊತೆಗೆ ಅವರ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ' ಎಂದರು.

ಭಿನ್ನಾಭಿಪ್ರಾಯ ಇಲ್ಲ: ರಾಜ್ಯ ಬಿಜೆಪಿಯಲ್ಲಿ ನಾಯಕರ್ವದ ಬಗ್ಗೆ ಎಲ್ಲಿಯೂ ಭಿನ್ನಾಭಿಪ್ರಾಯ ಇಲ್ಲ. ಇನ್ನೂ ಎರಡು ವರ್ಷ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕಟೀಲ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT