ಚಾಮರಾಜನಗರ: ರಾಜ್ಯದಲ್ಲಿಕೋವಿಡ್ನಿಂದಮೃತಪಟ್ಟ ಎಲ್ಲರ ಮನೆಗಳಿಗೆ ಪಕ್ಷದ ವತಿಯಿಂದ ಭೇಟಿ ನೀಡುವ ಬಗ್ಗೆ ಯೋಚನೆ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ಪಕ್ಷದ ಪದಾಧಿಕಾರಿಗಳು ಮೃತಪಟ್ಟವರ ಕುಟುಂಬಗಳನ್ನು ಗುರುತಿಸಿ ಸಾಂತ್ವನ ಹೇಳುವ ಜೊತೆಗೆ ಅವರ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ' ಎಂದರು.
ಭಿನ್ನಾಭಿಪ್ರಾಯ ಇಲ್ಲ: ರಾಜ್ಯ ಬಿಜೆಪಿಯಲ್ಲಿ ನಾಯಕರ್ವದ ಬಗ್ಗೆ ಎಲ್ಲಿಯೂ ಭಿನ್ನಾಭಿಪ್ರಾಯ ಇಲ್ಲ. ಇನ್ನೂ ಎರಡು ವರ್ಷ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕಟೀಲ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.