ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಶಾಸಕ ಅಪ್ಪಚ್ಚು ರಂಜನ್ ಅವರು ಟಿಪ್ಪುವಿನ ಕುರಿತ ಪಠ್ಯ ಕೈಬಿಡಬೇಕು. ಉಳಿಸಿದರೆ ಆತನ ಎಲ್ಲ ಅಂಶವನ್ನು ಸೇರಿಸಬೇಕು ಎಂದು ಒತ್ತಾಯಿಸಿದ್ದರು. ಅವರು ಪೂರಕವಾದ ಮಾಹಿತಿಗಳನ್ನೂ ನೀಡಿದ್ದಾರೆ. ಟಿಪ್ಪು ಆಡಳಿತದಲ್ಲಿ ಕನ್ನಡ ತೆಗೆದು ಪರ್ಷಿಯನ್ ಭಾಷೆ ಜಾರಿ ತಂದದ್ದು ಮತ್ತು ಕೊಡವರ ಮೇಲೆ ದೌರ್ಜನ್ಯ ಎಸಗಿದ ಬಗ್ಗೆ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ವಿವರಿಸಿದರು.