<p><strong>ಬೆಂಗಳೂರು</strong>: ಆಜಾನ್ ಬಗ್ಗೆ ಈಗಾಗಲೇ ಉಚ್ಚನ್ಯಾಯಾಲಯದ ಆದೇಶವಿದೆ. ಆ ಆದೇಶ ಅನುಷ್ಠಾನ ಏಕಾಗಿಲ್ಲ ಎಂದು ಮತ್ತೊಂದು ಆದೇಶವಿದೆ. ಆಜಾನ್ ಶಬ್ದ ಎಷ್ಟು ಡೆಸಿಬಲ್ ಇರಬೇಕು ಎಂದು ಅದರಲ್ಲಿ ಸೂಚಿಸಲಾಗಿದೆ. ಈ ವಿಚಾರದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು</p>.<p>ಆಜಾನ್ ವಿಚಾರದಲ್ಲಿ ಈ ಹಿಂದಿನ ಆದೇಶಗಳ ಜಾರಿಒತ್ತಾಯಪೂರ್ವಕವಾಗಿ ಮಾಡುವಂಥದ್ದಲ್ಲ. ಕ್ಷೇತ್ರ ಮಟ್ಟದಲ್ಲಿ ಹಲವಾರು ಸಂಘಟನೆಗಳ ಜೊತೆಗೆ ಪೊಲೀಸ್ ಠಾಣೆಯಿಂದ ಹಿಡಿದು ಜಿಲ್ಲಾ ಮಟ್ಟದಲ್ಲಿ ಹಿಂದೆಯೇ ಮಾಡಲಾಗಿದೆ. ಮುಂದೂ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಯಾವುದೇ ಸಮಾಜ, ಸಂಘಟನೆಯಾಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಭೇಧಭಾವವಿಲ್ಲದೆ ಕೆಲಸ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಏಪ್ರಿಲ್ 16 ರಿಂದ ಪ್ರತಿಭಟನೆ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರಿಗೆ ಪ್ರತಿಭಟಿಸುವ ಹಕ್ಕಿದೆ. ಆದರೆ, ಆಧಾರರಹಿತವಾದ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ ಎಂದರು.</p>.<p>ಬಿ.ಜೆ.ಪಿ ರಾಷ್ಟ್ರೀಯ ಪಕ್ಷ. ಕರ್ನಾಟಕ ಜನತೆಯ ಆಶೀರ್ವಾದ ಇದೆ. ಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ಆಡಳಿತ ನೀಡುವ ವಿಶ್ವಾಸವಿದೆ. ಹೇಳಿಕೆಗಳಿಂದ ಸಮಸ್ಯೆ ಇತ್ಯರ್ಥವಾಗುವುದಿಲ್ಲ. ಹಲವಾರು ವಿಚಾರಗಳು ಹಿಂದಿರುವ ವಿಚಾರ. 2001, 2002 ರ ಆದೇಶಗಳು. ನಾವು ಯಾವುದೇ ಹೊಸ ಆದೇಶವನ್ನು ಹೊರಡಿಸಿಲ್ಲ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.</p>.<p><a href="https://www.prajavani.net/karnataka-news/karnataka-government-hikes-dearness-allowance-for-state-government-employees-925544.html" itemprop="url">ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ: ಜನವರಿ 1ರಿಂದಲೇ ಪೂರ್ವಾನ್ವಯ </a></p>.<p><strong>ಸಚಿವ ಸಂಪುಟ ವಿಸ್ತರಣೆ</strong></p>.<p>ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇದುವರೆಗೂ ಯಾವುದೇ ಚರ್ಚೆಯಾಗಿಲ್ಲ. ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ವಿಚಾರ ಪ್ರಸ್ತಾಪವಾಗುವ ನಿರೀಕ್ಷೆ ಇದೆ ಎಂದರು.</p>.<p><strong>ಕೆ.ಟಿ.ರಾಮರಾವ್ ಟ್ವೀಟ್ ಹಾಸ್ಯಾಸ್ಪದ</strong></p>.<p>ಆಂಧ್ರಪ್ರದೇಶದ ಐ.ಟಿ.ಬಿ.ಟಿ ಸಚಿವ ಕೆ.ಟಿ.ರಾಮರಾವ್ ಅವರು ಮಾಡಿರುವ ಟ್ವೀಟ್ ಅತ್ಯಂತ ಹಾಸ್ಯಾಸ್ಪದವಾಗಿದೆ. ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರುತ್ತಿದ್ದಾರೆ. ಹೆಚ್ಚಿನ ಯೂನಿಕಾರ್ನ್ ಮತ್ತು ಸ್ಟಾರ್ಟ್ಪ್ಗಳು ಬೆಂಗಳೂರಿನಲ್ಲಿವೆ ಎಂದರು.</p>.<p><a href="https://www.prajavani.net/karnataka-news/former-chief-minister-questions-the-objection-to-ajan-925542.html" itemprop="url">ದೇಗುಲದಲ್ಲಿ ಸುಪ್ರಭಾತ, ಮಸೀದಿಯ ಆಜಾನ್ ಬಾಲ್ಯದಿಂದಲೂ ಕೇಳಿದ್ದೇವೆ: ಎಚ್ಡಿಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆಜಾನ್ ಬಗ್ಗೆ ಈಗಾಗಲೇ ಉಚ್ಚನ್ಯಾಯಾಲಯದ ಆದೇಶವಿದೆ. ಆ ಆದೇಶ ಅನುಷ್ಠಾನ ಏಕಾಗಿಲ್ಲ ಎಂದು ಮತ್ತೊಂದು ಆದೇಶವಿದೆ. ಆಜಾನ್ ಶಬ್ದ ಎಷ್ಟು ಡೆಸಿಬಲ್ ಇರಬೇಕು ಎಂದು ಅದರಲ್ಲಿ ಸೂಚಿಸಲಾಗಿದೆ. ಈ ವಿಚಾರದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು</p>.<p>ಆಜಾನ್ ವಿಚಾರದಲ್ಲಿ ಈ ಹಿಂದಿನ ಆದೇಶಗಳ ಜಾರಿಒತ್ತಾಯಪೂರ್ವಕವಾಗಿ ಮಾಡುವಂಥದ್ದಲ್ಲ. ಕ್ಷೇತ್ರ ಮಟ್ಟದಲ್ಲಿ ಹಲವಾರು ಸಂಘಟನೆಗಳ ಜೊತೆಗೆ ಪೊಲೀಸ್ ಠಾಣೆಯಿಂದ ಹಿಡಿದು ಜಿಲ್ಲಾ ಮಟ್ಟದಲ್ಲಿ ಹಿಂದೆಯೇ ಮಾಡಲಾಗಿದೆ. ಮುಂದೂ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಯಾವುದೇ ಸಮಾಜ, ಸಂಘಟನೆಯಾಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಭೇಧಭಾವವಿಲ್ಲದೆ ಕೆಲಸ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಏಪ್ರಿಲ್ 16 ರಿಂದ ಪ್ರತಿಭಟನೆ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರಿಗೆ ಪ್ರತಿಭಟಿಸುವ ಹಕ್ಕಿದೆ. ಆದರೆ, ಆಧಾರರಹಿತವಾದ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ ಎಂದರು.</p>.<p>ಬಿ.ಜೆ.ಪಿ ರಾಷ್ಟ್ರೀಯ ಪಕ್ಷ. ಕರ್ನಾಟಕ ಜನತೆಯ ಆಶೀರ್ವಾದ ಇದೆ. ಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ಆಡಳಿತ ನೀಡುವ ವಿಶ್ವಾಸವಿದೆ. ಹೇಳಿಕೆಗಳಿಂದ ಸಮಸ್ಯೆ ಇತ್ಯರ್ಥವಾಗುವುದಿಲ್ಲ. ಹಲವಾರು ವಿಚಾರಗಳು ಹಿಂದಿರುವ ವಿಚಾರ. 2001, 2002 ರ ಆದೇಶಗಳು. ನಾವು ಯಾವುದೇ ಹೊಸ ಆದೇಶವನ್ನು ಹೊರಡಿಸಿಲ್ಲ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.</p>.<p><a href="https://www.prajavani.net/karnataka-news/karnataka-government-hikes-dearness-allowance-for-state-government-employees-925544.html" itemprop="url">ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ: ಜನವರಿ 1ರಿಂದಲೇ ಪೂರ್ವಾನ್ವಯ </a></p>.<p><strong>ಸಚಿವ ಸಂಪುಟ ವಿಸ್ತರಣೆ</strong></p>.<p>ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇದುವರೆಗೂ ಯಾವುದೇ ಚರ್ಚೆಯಾಗಿಲ್ಲ. ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ವಿಚಾರ ಪ್ರಸ್ತಾಪವಾಗುವ ನಿರೀಕ್ಷೆ ಇದೆ ಎಂದರು.</p>.<p><strong>ಕೆ.ಟಿ.ರಾಮರಾವ್ ಟ್ವೀಟ್ ಹಾಸ್ಯಾಸ್ಪದ</strong></p>.<p>ಆಂಧ್ರಪ್ರದೇಶದ ಐ.ಟಿ.ಬಿ.ಟಿ ಸಚಿವ ಕೆ.ಟಿ.ರಾಮರಾವ್ ಅವರು ಮಾಡಿರುವ ಟ್ವೀಟ್ ಅತ್ಯಂತ ಹಾಸ್ಯಾಸ್ಪದವಾಗಿದೆ. ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರುತ್ತಿದ್ದಾರೆ. ಹೆಚ್ಚಿನ ಯೂನಿಕಾರ್ನ್ ಮತ್ತು ಸ್ಟಾರ್ಟ್ಪ್ಗಳು ಬೆಂಗಳೂರಿನಲ್ಲಿವೆ ಎಂದರು.</p>.<p><a href="https://www.prajavani.net/karnataka-news/former-chief-minister-questions-the-objection-to-ajan-925542.html" itemprop="url">ದೇಗುಲದಲ್ಲಿ ಸುಪ್ರಭಾತ, ಮಸೀದಿಯ ಆಜಾನ್ ಬಾಲ್ಯದಿಂದಲೂ ಕೇಳಿದ್ದೇವೆ: ಎಚ್ಡಿಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>