<p><strong>ಶಿರಾ:</strong> ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ಕುರಿತು ಅಧ್ಯಯನ ವರದಿ ಪಡೆಯಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸರ್ಕಾರ ಸೂಚನೆ ನೀಡಿರುವುದು ಸಂತಸ ತಂದಿದೆ ಎಂದು ಲಿಂಗಾಯತ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಂಗಳೂರಿನತ್ತ ಹೊರಟಿರುವ ಪಾದಯಾತ್ರೆ ಶನಿವಾರ ತಾಲ್ಲೂಕಿನ ತಾವರೆಕೆರೆ ಮೂಲಕ ತುಮಕೂರು ಜಿಲ್ಲೆ ಪ್ರವೇಶಿಸಿತು.</p>.<p>ತಾವರೆಕೆರೆ ಗ್ರಾಮದ ಸಮೀಪದ ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಶ್ರಾಂತಿ ಪಡೆದ ನಂತರ ಸ್ವಾಮೀಜಿ ಮಾತನಾಡಿದರು.</p>.<p>ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿವೇಶನದಲ್ಲಿ ನೀಡಿರುವ ಹೇಳಿಕೆ ನೋವು ತಂದಿತ್ತು. ಆದರೆ ಮುಖ್ಯಮಂತ್ರಿ ಮನಸ್ಸು ಬದಲಾಯಿಸಿಕೊಂಡು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಪಡೆದು ಕ್ರಮತೆಗೆದುಕೊಳ್ಳುವುದಾಗಿ ಹೇಳಿರುವುದು ಸಂತಸದ ವಿಷಯವಾಗಿದೆ ಎಂದರು.</p>.<p>ಸಮುದಾಯವನ್ನು 2 ಎ ಗೆ ಸೇರಿಸುವ ಆದೇಶದೊಂದಿಗೆ ಮರಳುತ್ತೇವೆ ಎಂದು ಭಕ್ತರಿಗೆ ಮಾತು ಕೊಟ್ಟಿದ್ದೇವೆ. ಅದನ್ನು ಪಡೆಯುವ ತನಕ ಮಠಕ್ಕೆ ಹಿಂದಿರುಗುವುದಿಲ್ಲ. ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ನಮ್ಮ ಬೇಡಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಗೆಜೆಟ್ ಪ್ರಕಟಣೆ ಹೊರಡಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳಿಗೆ 2 ಎ ಪ್ರಮಾಣಪತ್ರ ನೀಡಲು ಆದೇಶ ಮಾಡಬೇಕು ಎಂದು ಆಗ್ರಹಿಸಿದರು. ಹರಿಹರ ಪೀಠದ ವಚನಾನಂದ ಸ್ವಾಮೀಜಿ, ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ಕುರಿತು ಅಧ್ಯಯನ ವರದಿ ಪಡೆಯಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸರ್ಕಾರ ಸೂಚನೆ ನೀಡಿರುವುದು ಸಂತಸ ತಂದಿದೆ ಎಂದು ಲಿಂಗಾಯತ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಂಗಳೂರಿನತ್ತ ಹೊರಟಿರುವ ಪಾದಯಾತ್ರೆ ಶನಿವಾರ ತಾಲ್ಲೂಕಿನ ತಾವರೆಕೆರೆ ಮೂಲಕ ತುಮಕೂರು ಜಿಲ್ಲೆ ಪ್ರವೇಶಿಸಿತು.</p>.<p>ತಾವರೆಕೆರೆ ಗ್ರಾಮದ ಸಮೀಪದ ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಶ್ರಾಂತಿ ಪಡೆದ ನಂತರ ಸ್ವಾಮೀಜಿ ಮಾತನಾಡಿದರು.</p>.<p>ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿವೇಶನದಲ್ಲಿ ನೀಡಿರುವ ಹೇಳಿಕೆ ನೋವು ತಂದಿತ್ತು. ಆದರೆ ಮುಖ್ಯಮಂತ್ರಿ ಮನಸ್ಸು ಬದಲಾಯಿಸಿಕೊಂಡು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಪಡೆದು ಕ್ರಮತೆಗೆದುಕೊಳ್ಳುವುದಾಗಿ ಹೇಳಿರುವುದು ಸಂತಸದ ವಿಷಯವಾಗಿದೆ ಎಂದರು.</p>.<p>ಸಮುದಾಯವನ್ನು 2 ಎ ಗೆ ಸೇರಿಸುವ ಆದೇಶದೊಂದಿಗೆ ಮರಳುತ್ತೇವೆ ಎಂದು ಭಕ್ತರಿಗೆ ಮಾತು ಕೊಟ್ಟಿದ್ದೇವೆ. ಅದನ್ನು ಪಡೆಯುವ ತನಕ ಮಠಕ್ಕೆ ಹಿಂದಿರುಗುವುದಿಲ್ಲ. ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ನಮ್ಮ ಬೇಡಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಗೆಜೆಟ್ ಪ್ರಕಟಣೆ ಹೊರಡಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳಿಗೆ 2 ಎ ಪ್ರಮಾಣಪತ್ರ ನೀಡಲು ಆದೇಶ ಮಾಡಬೇಕು ಎಂದು ಆಗ್ರಹಿಸಿದರು. ಹರಿಹರ ಪೀಠದ ವಚನಾನಂದ ಸ್ವಾಮೀಜಿ, ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>