<p><strong>ಬೆಂಗಳೂರು: </strong>ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಉದ್ದೇಶದಿಂದ ಹಲವು ನಾಯಕರನ್ನು ತೊಡಗಿಸಿಕೊಳ್ಳುತ್ತಿರುವ ಬಿಜೆಪಿ ವರಿಷ್ಠರು, ರಾಜ್ಯದ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರನ್ನೂ ಕರೆಯಿಸಿಕೊಂಡಿದೆ.</p>.<p>ಕಲಬುರ್ಗಿ ಪ್ರವಾಸದಲ್ಲಿರುವ ಸಚಿವ ಅರವಿಂದ ಲಿಂಬಾವಳಿ ಅವರಿಗೆ ದೆಹಲಿಯಿಂದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರ ತುರ್ತು ಕರೆ ಬಂದ ಕಾರಣ ತಮ್ಮ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ತೆರಳಿದರು.</p>.<p>ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಈಗಾಗಲೇ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.</p>.<p>ತೆಲಂಗಾಣ ಸೇರಿ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿರುವ ಅರವಿಂದ್ ಅವರನ್ನು ಪಶ್ಚಿಮಬಂಗಾಳದಲ್ಲಿ ತೊಡಗಿಸಿಕೊಳ್ಳುವಂತೆ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಉದ್ದೇಶದಿಂದ ಹಲವು ನಾಯಕರನ್ನು ತೊಡಗಿಸಿಕೊಳ್ಳುತ್ತಿರುವ ಬಿಜೆಪಿ ವರಿಷ್ಠರು, ರಾಜ್ಯದ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರನ್ನೂ ಕರೆಯಿಸಿಕೊಂಡಿದೆ.</p>.<p>ಕಲಬುರ್ಗಿ ಪ್ರವಾಸದಲ್ಲಿರುವ ಸಚಿವ ಅರವಿಂದ ಲಿಂಬಾವಳಿ ಅವರಿಗೆ ದೆಹಲಿಯಿಂದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರ ತುರ್ತು ಕರೆ ಬಂದ ಕಾರಣ ತಮ್ಮ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ತೆರಳಿದರು.</p>.<p>ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಈಗಾಗಲೇ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.</p>.<p>ತೆಲಂಗಾಣ ಸೇರಿ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿರುವ ಅರವಿಂದ್ ಅವರನ್ನು ಪಶ್ಚಿಮಬಂಗಾಳದಲ್ಲಿ ತೊಡಗಿಸಿಕೊಳ್ಳುವಂತೆ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>