ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಏನಾಯಿತು?: ಸಿದ್ದರಾಮಯ್ಯ

Last Updated 11 ಏಪ್ರಿಲ್ 2021, 17:17 IST
ಅಕ್ಷರ ಗಾತ್ರ

ಸಿಂಧನೂರು (ರಾಯಚೂರು ಜಿಲ್ಲೆ): ‘ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಜೊತೆಗೂಡಿ ಕಟ್ಟಿದ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಏನಾಯಿತು? ನಾನುಬೂಟಾಟಿಕೆಗಾಗಿ ಹೋರಾಟ ಮತ್ತು ರಾಜಕಾರಣ ಮಾಡಲ್ಲ. ನನ್ನ ಜೀವ ಇರುವವರಿಗೂ ಮೀಸಲಾತಿ ಪರವಾಗಿಯೇ ಹೋರಾಟ ಮಾಡುವೆ’ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ತಿಳಿಸಿದರು.

‘ಸುಳ್ಳು ಹೇಳುವ ಮನುಷ್ಯ ನಾನಲ್ಲ. ಈ ಬಗ್ಗೆ ಯಡಿಯೂರಪ್ಪ, ಈಶ್ವರಪ್ಪ ಚರ್ಚೆಗೆ ಬರಲಿ. ವಿರೂಪಾಕ್ಷಪ್ಪ ಬಂದರೂ ಪರವಾಗಿಲ್ಲ. ಸತ್ಯ ಹೇಳುವುದಕ್ಕೆ ಎಂದಿಗೂ ಹೆದರಬಾರದು’ ಎಂದು ಅವರು ತಿಳಿಸಿದರು.

‘ಸ್ವಾತಂತ್ರ್ಯ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಹಿತರಕ್ಷಣೆಯೊಂದಿಗೆ ಸಾಮಾಜಿಕ ನ್ಯಾಯವನ್ನುಎತ್ತಿಹಿಡಿದು ಮೀಸಲಾತಿ ಕಾಪಾಡುತ್ತಿದೆ. ಆದರೆ, ಮೀಸಲಾತಿ ವಿರೋಧಿಯಾದ ಬಿಜೆಪಿ ಸಾಮಾಜಿಕನ್ಯಾಯದ ಪರವಾಗಿ ಇರುವ ಒಂದೇ ಒಂದು ನಿದರ್ಶನ ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುವೆ’ ಎಂದು ಅವರು ಸವಾಲುಹಾಕಿದರು.

‘ಬಿಜೆಪಿ ಅಭ್ಯರ್ಥಿ ಸೋಲಿನ ಭಯದಿಂದ ಆ ಪಕ್ಷದವರು ಮಸ್ಕಿ ವಿಧಾನಸಭಾ ಕ್ಷೇತ್ರದ ತುಂಬಾ ಮನೆ ಮನೆಗೆ ತೆರಳಿಜನರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ‘ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT