ಲೆಟ್ಜ್ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಒಬ್ಬ ವ್ಯಕ್ತಿಯ ಅನುಕೂಲಕ್ಕಾಗಿ ದೇವಾಲಯ ತೆರೆದು ಪೂಜೆ ನೆರವೇರಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಉಲ್ಲಂಘನೆಯಾಗಿದ್ದು, ಕ್ರಮ ಕೈಗೊಂಡಿರುವ ಬಗ್ಗೆ ಜೂ.3ರೊಳಗೆ ವರದಿ ಸಲ್ಲಿಸಬೇಕು’ ಎಂದು ಸೂಚಿಸಿತು.