<p><strong>ಬೆಂಗಳೂರು: </strong>‘ಜಾತಿಗೂ ಭ್ರಷ್ಟಾಚಾರಕ್ಕೂ ಏನು ಸಂಬಂಧ? ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿಯವರು ಈಗ ಜಾತಿ ಬಣ್ಣ ಕಟ್ಟಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಲಿಂಗಾಯತ ವಿರೋಧಿ ಕಾಂಗ್ರೆಸ್’ ಎಂದು ಬಿಜೆಪಿ ಅಭಿಯಾನ ಆರಂಭಿಸಿರುವ ಬಗ್ಗೆ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಶೇ 40 ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘ ಮಾಡಿದ್ದ ಆರೋಪದ ಬಗ್ಗೆ ನಾವು ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದೇವೆ’ ಎಂದರು.</p>.<p>‘ಸಿದ್ದರಾಮಯ್ಯ ಸರ್ಕಾರ ಶೇ 10 ಸರ್ಕಾರ ಎಂದು ನರೇಂದ್ರ ಮೋದಿ ಸುಳ್ಳು ಆರೋಪ ಮಾಡಿದ್ದರು. ಏನೂ ಆಧಾರ ಇಲ್ಲದೆ ನನ್ನ ಮೇಲೆ ಅವರು ಈ ಆರೋಪ ಮಾಡಿದ್ದರು. ನಾನು ಕುರುಬ ಎಂದು ಮೋದಿ ಆರೋಪ ಮಾಡಿದ್ರಾ’ ಎಂದು ಪ್ರಶ್ನಿಸಿದರು.</p>.<p>‘ನಮ್ಮಲ್ಲಿಯೂ ಲಿಂಗಾಯತ ನಾಯಕರು ಇಲ್ವಾ. ಬಿಜೆಪಿಯವರು ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಜಾತಿ ಮೊರೆ ಹೋಗಿದ್ದಾರೆ’ ಎಂದರು.</p>.<p>‘ನನ್ನ ಮೇಲೂ ಸುಳ್ಳು, ಸುಳ್ಳು ಪುಸ್ತಕವನ್ನು ಬಿಜೆಪಿವರು ಹೊರಡಿಸಿದ್ದಾರೆ. ನಾನು ಕುರುಬ ಎಂಬ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆಂದು ನಾನು ಹೇಳಬಹುದೆ?. ವೀರೇಂದ್ರ ಪಾಟೀಲ್ ಅವರಿಗೆ ಲಕ್ವ ಇತ್ತು. ಹೀಗಾಗಿ, ಹಿಂದೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಿದ್ದರು’ ಎಂದರು.</p>.<p>‘ಬಿಜೆಪಿಯವರು ವಿಜಯೇಂದ್ರ ಅವರನ್ನು ಮಂತ್ರಿ ಮಾಡದಿರುವುದು ಯಾಕೆ’ ಎಂದೂ ಪ್ರಶ್ನಿಸುವ ಮೂಲಕ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಜಾತಿಗೂ ಭ್ರಷ್ಟಾಚಾರಕ್ಕೂ ಏನು ಸಂಬಂಧ? ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿಯವರು ಈಗ ಜಾತಿ ಬಣ್ಣ ಕಟ್ಟಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಲಿಂಗಾಯತ ವಿರೋಧಿ ಕಾಂಗ್ರೆಸ್’ ಎಂದು ಬಿಜೆಪಿ ಅಭಿಯಾನ ಆರಂಭಿಸಿರುವ ಬಗ್ಗೆ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಶೇ 40 ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘ ಮಾಡಿದ್ದ ಆರೋಪದ ಬಗ್ಗೆ ನಾವು ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದೇವೆ’ ಎಂದರು.</p>.<p>‘ಸಿದ್ದರಾಮಯ್ಯ ಸರ್ಕಾರ ಶೇ 10 ಸರ್ಕಾರ ಎಂದು ನರೇಂದ್ರ ಮೋದಿ ಸುಳ್ಳು ಆರೋಪ ಮಾಡಿದ್ದರು. ಏನೂ ಆಧಾರ ಇಲ್ಲದೆ ನನ್ನ ಮೇಲೆ ಅವರು ಈ ಆರೋಪ ಮಾಡಿದ್ದರು. ನಾನು ಕುರುಬ ಎಂದು ಮೋದಿ ಆರೋಪ ಮಾಡಿದ್ರಾ’ ಎಂದು ಪ್ರಶ್ನಿಸಿದರು.</p>.<p>‘ನಮ್ಮಲ್ಲಿಯೂ ಲಿಂಗಾಯತ ನಾಯಕರು ಇಲ್ವಾ. ಬಿಜೆಪಿಯವರು ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಜಾತಿ ಮೊರೆ ಹೋಗಿದ್ದಾರೆ’ ಎಂದರು.</p>.<p>‘ನನ್ನ ಮೇಲೂ ಸುಳ್ಳು, ಸುಳ್ಳು ಪುಸ್ತಕವನ್ನು ಬಿಜೆಪಿವರು ಹೊರಡಿಸಿದ್ದಾರೆ. ನಾನು ಕುರುಬ ಎಂಬ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆಂದು ನಾನು ಹೇಳಬಹುದೆ?. ವೀರೇಂದ್ರ ಪಾಟೀಲ್ ಅವರಿಗೆ ಲಕ್ವ ಇತ್ತು. ಹೀಗಾಗಿ, ಹಿಂದೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಿದ್ದರು’ ಎಂದರು.</p>.<p>‘ಬಿಜೆಪಿಯವರು ವಿಜಯೇಂದ್ರ ಅವರನ್ನು ಮಂತ್ರಿ ಮಾಡದಿರುವುದು ಯಾಕೆ’ ಎಂದೂ ಪ್ರಶ್ನಿಸುವ ಮೂಲಕ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>