ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂಬೇಡ್ಕರ್, ಗಾಂಧೀಜಿ ಅವರ ಭಾವಚಿತ್ರ ಅನಾವರಣ ಮಾಡಲಾಗುತ್ತಿದೆ ಎಂದಷ್ಟೇ ಸ್ಪೀಕರ್ ಕಚೇರಿಯಿಂದ ಆಹ್ವಾನ ಬಂದಿದೆ. ಸಾವರ್ಕರ್ಭಾವಚಿತ್ರದ ವಿಷಯ ತಿಳಿಸಿಲ್ಲ. ಅನಾವರಣ ಮಾಡಿದರೆ, ಕಾಂಗ್ರೆಸ್ ನಿಲುವು ಅಲ್ಲಿಯೇ ಪ್ರಕಟಿಸಲಾಗುವುದು’ ಎಂದರು.