‘ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ, ನಗರದಲ್ಲಿ ಎನ್ಐಎ ಮಾಡಿರುವ ಹಲವು ಬಂಧನಗಳು ಅದನ್ನು ಸಾಬೀತು ಮಾಡಿವೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಶಾಶ್ವತ ವಿಭಾಗವನ್ನು ಸ್ಥಾಪಿಸುವಂತೆ ನಾನು ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದೆ. ಶೀಘ್ರದಲ್ಲೇ ಎನ್ಐಎಯನ್ನು ಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ,’ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಹೇಳಿದ್ದರು.