ಕೇಂದ್ರ ನಂಬಿದರೆ ಗೌರವವಿಲ್ಲ: ಕೇಂದ್ರ ಸರ್ಕಾರ ನಂಬಿದರೆ ನಿಮಗೆ ಗೌರವ ಇಲ್ಲ, ಪಕ್ಕದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಿ ಜನತೆ ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಯುವಕರಿಗೆ ಮುಂದಿನ ಚುನಾವಣೆಯಲ್ಲಿ ಅವಕಾಶ ನೀಡುತ್ತೇವೆ. ಉಚಿತ ಶಿಕ್ಷಣ, ಆರೋಗ್ಯ, ಕೃಷಿ ವಲಯಕ್ಕೆ ಆದ್ಯತೆ, ಯುವಕರಿಗೆ ಉದ್ಯೋಗ ಒದಗಿಸುವುದು ನನ್ನ ಯೋಜನೆಗಳಾಗಿವೆ ಎಂದು ಹೇಳಿದರು.