ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ: ಚುನಾವಣೆಯಲ್ಲಿ ಜಾತಿ ಅಸ್ತ್ರ ಬಳಸುತ್ತಿರುವ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ವ್ಯಂಗ್ಯವಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘ನಾನು ಯಾರನ್ನೂ ನಿಂದಿಸುವುದಿಲ್ಲ. ಯಾರು ತಪ್ಪು ಮಾಡಿದ್ದಾರೋ ಅವರು ಅನುಭವಿಸುತ್ತಾರೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಒಳ್ಳೆಯದು ಮಾಡಿದ್ದರೆ ದೇವರು ನನಗೆ ಒಳ್ಳೆಯದು ಮಾಡಲಿ’ ಎಂದರು.