ಬಿಜೆಪಿ ಪ್ರತ್ಯುತ್ತರ: ಟ್ವಿಟರ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಘಟಕ, ‘ಮೋದಿ ಸರ್ಕಾರ ಲಸಿಕೆ ಕಂಡುಹಿಡಿದು 70ಕ್ಕೂ ಹೆಚ್ಚು ದೇಶಗಳಿಗೆ ಒದಗಿಸಿದೆ. ಆದರೆ, ಕಾಂಗ್ರೆಸ್ ನಾಯಕರ ಕೊಳಕು ಮನಸ್ಥಿತಿಗೆ ಲಸಿಕೆ ಶೋಧಿಸಲು ಸಾಧ್ಯವಿಲ್ಲ. ಆರು ದಶಕದಿಂದ ದೇಶದಲ್ಲಿ ಕಾಂಗ್ರೆಸ್ ನಡೆಸಿದ ಲೂಟಿಯ ಲೆಕ್ಕ ಕೇಳುವ ಧೈರ್ಯ ತೋರುವಿರಾ? ಲೆಕ್ಕ ಕೇಳುವುದಕ್ಕೆ ಗಾಂಧಿ ಕುಟುಂಬದ ಭಯವೆ’ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.