ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LIVE| ನಾಳೆ ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ
LIVE

ಬಿ.ಎಸ್‌ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಘೋಷಿಸಲಾಯಿತು.
Last Updated 27 ಜುಲೈ 2021, 17:09 IST
ಅಕ್ಷರ ಗಾತ್ರ
17:0827 Jul 2021

ಹಾವೇರಿಯಲ್ಲಿ ಸಂಭ್ರಮ

ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಘೋಷಣೆಯಾದ ಹಿನ್ನೆಲೆಯಲ್ಲಿ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು

17:0227 Jul 2021

ಬಿಜೆಪಿ ಕಚೇರಿಯಲ್ಲಿ ಬೊಮ್ಮಾಯಿ

ಇಂದು ರಾತ್ರಿ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನಿಯೋಜಿತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಮತ್ತು ಜಗನ್ನಾಥರಾವ್ ಜೋಶಿ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

16:5927 Jul 2021

ಉಡುಪಿ: ಬಿಜೆಪಿ ಸಂಭ್ರಮಾಚರಣೆ

ಉಡುಪಿ: ಬಸವರಾಜ ಬೊಮ್ಮಾಯಿ ನಿಯೋಜಿತ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬೆನ್ನಲ್ಲೇ ನಗರದ ಕ್ಲಾಕ್ ಟವರ್ ಬಳಿ ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ ಬೊಮ್ಮಾಯಿ ಪರ ಘೋಷಣೆ ಕೂಗಿದರು.

16:4927 Jul 2021

ಜಗನ್ನಾಥ ಭವನಕ್ಕೆ ಭೇಟಿ ಬೊಮ್ಮಾಯಿ

ರಾಜಭವನಕ್ಕೆ ಭೇಟಿ ನೀಡಿ ಹಕ್ಕು ಮಂಡಿಸಿದ ಬಳಿಕ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿದ ನಿಯೋಜಿತ ಮುಖ್ಯಮಂತ್ರಿ ಬೊಮ್ಮಾಯಿ

16:1427 Jul 2021

‘ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇನೆ‘

ರಾಜ್ಯಪಾಲರ ಭೇಟಿ ಬಳಿಕ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ–

ನನ್ನ ಗುರುಗಳಾದ ಯಡಿಯೂರಪ್ಪ ಅವರ ಆಶಿರ್ವಾದೊಂದಿಗೆ ನಾನು ಶಾಸಕಾಂಗ ಪಕ್ಷದ ನಾಯಕನಾಗಿ ಚುನಾಯಿತನಾಗಿದ್ದೇನೆ. ಯಡಿಯೂರಪ್ಪ ಅವರು 40 ವರ್ಷ ಬಿಜೆಪಿಯನ್ನು ಬೆವರು ಸುರಿಸಿ ಕಟ್ಟಿದ್ದಾರೆ. ಪಕ್ಷಕ್ಕೆ ತನ್ನದೇ ಆದ ಪರಂಪರೆಗಳಳಿವೆ. ಯಡಿಯೂರಪ್ಪ ಅವರ ತ್ಯಾಗಮಯ ನಿರ್ಣಯದಿಂದ ಎರಡು ವರ್ಷ ಕಷ್ಟದ ಪರಿಸ್ಥಿತಿಯಲ್ಲಿ ಎರಡು ಬಾರಿ ಕೋವಿಡ್‌. ಎರಡು ಬಾರಿ ಪ್ರವಾಹ ಎದುರಿಸಿ ರಾಜ್ಯವನ್ನು ಮುನ್ನಡೆಸಿದ್ದಾರೆ. ಹಣಕಾಸಿನ ಕೊರತೆ ಆಗದಂತೆ ಹಣಕಾಸು ನಿರ್ವಹಣೆ ಮಾಡಿದ್ದಾರೆ.

ನನ್ನ ಆಯ್ಕೆಯ ಬಗ್ಗೆ ರಾಜ್ಯಪಾಲರಿಗೆ ತಿಳಿಸಲಾಗಿದೆ. ಅವರು ಸರ್ಕಾರ  ರಚಿಸಲು ಆಹ್ವಾನ ಕೊಟ್ಟಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುತ್ತೇನೆ. ನಾನು ಒಬ್ಬನೇ ಪ್ರಮಾಣ ವನಚ ಸ್ವೀಕರಿಸುತ್ತೇನೆ.

16:0227 Jul 2021

ರಾಜಭವನದಲ್ಲಿ ನಾಳೆ ಬೆಳಿಗ್ಗೆ ಬೊಮ್ಮಾಯಿ ಪ್ರಮಾಣ ವಚನ

ನಾಳೆ ಬೆಳಿಗ್ಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅಧಿಕೃತ ಆಹ್ವಾನ ನೀಡಿದ್ದಾರೆ.

15:3227 Jul 2021

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ; ಬಿಜೆಪಿ ಶಾಸಕರ ಅಭಿಪ್ರಾಯ

ಕೇಂದ್ರ ವರಿಷ್ಠ ಮಂಡಳಿಯ ತೀರ್ಮಾನಕ್ಕೆ ಬದ್ಧ. ಎಲ್ಲರ ವಿಶ್ವಾಸ ತೆಗೆದುಕೊಂಡು ಬಸವರಾಜ ಬೊಮ್ಮಾಯಿ ಅವರನ್ನು ಹೈಕಮಾಂಡ್‌ ಆಯ್ಕೆ ಮಾಡಿದೆ. ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ ನಾವೆಲ್ಲ ಕೂಡಿ ಕೆಲಸ ಮಾಡುತ್ತೇವೆ. ಅವರ ಆಯ್ಕೆಗೆ ಸಹಮತಿ ಇದ್ದೇ ಇದೆ.

- ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್


ಹೈಕಮಾಂಡ್‌ ಒಳ್ಳೆಯ ತೀರ್ಮಾನ ತೆಗೆದುಕೊಂಡಿದೆ. ನನಗೆ ಖುಷಿ ಆಗಿದೆ. ಬಸವರಾಜ ಬೊಮ್ಮಾಯಿ ಒಳ್ಳೆಯ ವ್ಯಕ್ತಿ. ಅನುಭವಿ.

-ಅರವಿಂದ ಬೆಲ್ಲದ್‌

* ಬಸವರಾಜ ಬೊಮ್ಮಾಯಿ ಹುಷಾರ್‌ ಮುನಷ್ಯ, ಎಲ್ಲರಿಗೂ ಸಾಥ್‌ ಕೊಟ್ಟಿದ್ದಾರೆ.

– ಪ್ರಭು ಚವ್ಹಾಣ

*  ಪಕ್ಷದ ನಾಯಕರಾಗಿ ಬಸವರಾಜ ಬೊಮ್ಮಾಯಿ ಅನುಭವಿ ರಾಜಕಾರಣಿ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಉತ್ತಮ ಆಯ್ಕೆ. ಒಳ್ಳೆಯ ತೀರ್ಮಾನ, ಇದನ್ನು ಸ್ವಾಗತಿಸುತ್ತೇನೆ.

–ವಿ. ಸೋಮಣ್ಣ

* ಬವರಾಜ ಬೊಮ್ಮಾಯಿ ಹಿರಿಯ ಅನುಭವಿ ರಾಜಕಾರಣಿ. ಅವರ ಆಯ್ಕೆ ಎಲ್ಲರ ಸರ್ವಸಮ್ಮತದ ತೀರ್ಮಾನ.

–ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನಕುಮಾರ್ ಕಟೀಲ್‌

15:3027 Jul 2021

ತಮ್ಮ ಸಿ.ಎಂ ಆಗುತ್ತಾನೆಂಬ ನಂಬಿಕೆ ಇತ್ತು: ಬೊಮ್ಮಾಯಿ ಅಕ್ಕ ಉಮಾ ಪಾಟೀಲ

ಹುಬ್ಬಳ್ಳಿ: ನನ್ನ ತಮ್ಮ ಇಂದಲ್ಲ ನಾಳೆ, ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾನೆ ಎಂಬ ನಂಬಿಕೆ ಇತ್ತು. ಅದರಂತೆ, ಇಂದು ಸಿ.ಎಂ ಆಗಿ ಆಯ್ಕೆಯಾಗಿದ್ದಾನೆ ಎಂದು ಬಸವರಾಜ ಬೊಮ್ಮಾಯಿ ಅವರ ಅಕ್ಕ ಉಮಾ ಪಾಟೀಲ ಅವರು ಸಂತಸ ವ್ಯಕ್ತಪಡಿಸಿದರು.

15:1427 Jul 2021

ಬಿಜೆಪಿಗೆ ಪಟ್ಟು ಬೀಳುವುದರಲ್ಲಿ ಸಂದೇಹವೇ ಇಲ್ಲ: ರಂಭಾಪುರಿ ಶ್ರೀ

ಬೆಳಗಾವಿ: ‘ಬಿ.ಎಸ್. ಯಡಿಯೂರಪ್ಪ ಅವರ ಪದಚ್ಯುತಿಯಿಂದ ಬಿಜೆಪಿಗೆ ಮುಂದಿನ ದಿನಗಳಲ್ಲಿ ಬಹಳಷ್ಟು ಪೆಟ್ಟು ಬೀಳುವುದರಲ್ಲಿ ಸಂದೇಹವೇ ಇಲ್ಲ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

15:0127 Jul 2021

ಬೊಮ್ಮಾಯಿ ಹೆಸರು ಸೂಚಿಸಿದ ಬಿಎಸ್‌ವೈ

ಬುಧವಾರ ಬೆಳಿಗ್ಗೆಯೇ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಗೋವಿಂದ ಕಾರಜೋಳ ಅವರು ಬೊಮ್ಮಾಯಿ ಹೆಸರು ಸೂಚಿಸಿದರು. ಸಭೆಯಲ್ಲಿ ಅಧಿಕೃತ ಒಪ್ಪಿಗೆ ದೊರೆತಿಯಿತು. ರಾಜ್ಯಪಾಲರ ಭೇಟಿಗಾಗಿ ಬಸವರಾಜ ಬೊಮ್ಮಾಯಿ ರಾಜಭವನಕ್ಕೆ ಹೊರಟರು.

ಯಡಿಯೂರಪ್ಪ ಅವರು ಬೊಮ್ಮಾಯಿ ಅವರು ಹೆಸರು ಸೂಚಿಸಿದ್ದರು. ಕಾರಜೋಳ, ಅಶೋಕ, ಈಶ್ವರಪ್ಪ, ಪೂರ್ಣಿಮಾ ಅವರು ಶಾಸಕಾಂಗ ಸಭೆಯಲ್ಲಿ ಅನುಮೋದನೆ ನೀಡಿದರು.