‘ಶಾಲೆಗಳಲ್ಲಿ ಮೊಟ್ಟೆ ತಿನ್ನುವರಿಗೆ ಅವನ್ನು ಪ್ರತ್ಯೇಕವಾಗಿ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಹಣ್ಣನ್ನೂ ಪ್ರತ್ಯೇಕವಾಗಿ ನೀಡಲಾಗುತ್ತದೆ. ಬಹುಶಃ ಈ ಸಂಗತಿ ಅರಿಯದ ಸ್ವಾಮೀಜಿಯವರು, ಯಾವುದಾದರೂ ಸರ್ಕಾರಿ ಶಾಲೆಗೆ ಸೇರಿ ಅಲ್ಲಿನ ಆಹಾರ ವಿತರಣೆ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಲಿ’ ಎಂದು ಸಲಹೆ ನೀಡಿದ್ದಾರೆ. ‘ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಇದೆ. ಸರ್ಕಾರವು ಮೊಟ್ಟೆ ಕೊಡುವ ಬದಲು ನೇರವಾಗಿ ಹಣ ನೀಡಿದರೆ ಯಾರಿಗೆ ಏನು ಬೇಕೋ ಅದನ್ನು ಖರೀದಿಸಿ ತಿನ್ನುತ್ತಾರೆ’ ಎಂದು ಶ್ರೀಗಳು ಹೇಳಿದ್ದರು.