ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿಗೇಕೆ ಬಿಜೆಪಿ ಚಿಂತೆ: ಎಸ್‌.ಟಿ. ಸೋಮಶೇಖರ್‌

Last Updated 1 ಮಾರ್ಚ್ 2023, 3:31 IST
ಅಕ್ಷರ ಗಾತ್ರ

ಬೆಂಗಳೂರು: ‘ಡಿ.ಕೆ. ಶಿವಕುಮಾರ್‌ ಅವರಿಗೇಕೆ ಬಿಜೆಪಿಯ ಚಿಂತೆ. ಅವರು ಎಲ್ಲಾದರೂ ಪಕ್ಷ ಕಟ್ಟಿದ್ದಾರೆಯೆ’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಪ್ರಶ್ನಿಸಿದರು.

ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದ ಘಟನೆ ಕುರಿತು ಶಿವಕುಮಾರ್‌ ನೀಡಿದ್ದ ಹೇಳಿಕೆ ಬಗ್ಗೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ‘ಯಡಿಯೂರಪ್ಪ ಅವರು 60 ವರ್ಷದಿಂದ ರಾಜಕಾರಣದಲ್ಲಿ ಇದ್ದಾರೆ. ಸುದೀರ್ಘ ಹಾದಿಯನ್ನು ಕ್ರಮಿಸಿ ಮೇಲೆ ಬಂದವರು. ಅವರನ್ನು ಯಾವುದಕ್ಕೂ ಹೋಲಿಕೆ ಮಾಡಬೇಡಿ’ ಎಂದರು.

‘ನಾನು ಬಿಜೆಪಿಯಲ್ಲಿ ಇದ್ದೇನೆ. ಮುಂದೆಯೂ ಇದೇ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ. ನಾವು ಯಾರೂ ಬೇರೆ ಯಾವುದೇ ಪಕ್ಷಕ್ಕೂ ಹೋಗುವುದಿಲ್ಲ. ಯಾವ ಪಕ್ಷದಿಂದಲೂ ನಮಗೆ ಆಹ್ವಾನವೂ ಬಂದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT