‘ಇದೇ 17ರಂದು ಸೇರುತ್ತಾರೆ ಎಂಬ ಯಾರೊ ತಪ್ಪು ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಸೇರುವುದು ಯಾವತ್ತು ಎಂಬುದು ತೀರ್ಮಾನವಾಗಿಲ್ಲ. 17ರಂದು ಬೆಳ್ತಂಗಂಡಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಇದೆ, ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಕೃತಿ ಬಿಡುಗಡೆ.ಗೊಳಿಸುತ್ತಾರೆ, ಪುಸ್ತಕ ಕುರಿತು ನಾನು ಮಾತನಾಡುತ್ತೇನೆ. ಪುಸ್ತಕ ಬಿಡುಗಡೆ ಆಹ್ವಾನ ಪತ್ರಿಕೆಯಲ್ಲಿ ನಮ್ಮಿಬ್ಬರ ಹೆಸರು ಇರುವುದರಿಂದ ಎಲ್ಲರೂ ಅವತ್ತು ಸೇರುತ್ತೇನೆ ಎಂದುಕೊಂಡಿರಬಹುದು. ಅದೊಂದು ಸಾಹಿತ್ಯಕ ಕಾರ್ಯಕ್ರಮ, ಅವತ್ತು ಕಾಂಗ್ರೆಸ್ ಸೇರಲ್ಲ. ಯಾವತ್ತು ಸೇರುತ್ತೇನೆ ಎಂಬುದನ್ನು ಶೀಘ್ರದಲ್ಲಿ ತಿಳಿಸುತ್ತೇನೆ’ ಎಂದು ಸ್ಪಷ್ಟಪಡಿಸಿದರು.