<p><strong>ಬೆಂಗಳೂರು:</strong> ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು<br />ಉಲ್ಲಂಘಿಸಿರುವುದನ್ನು ಒಪ್ಪಿಕೊಂಡಿರುವ ರಾಜಕಾರಣಿಗಳನ್ನು ಶಿಕ್ಷಿಸಲು ಸಿದ್ಧವೇ ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೈಕೋರ್ಟ್ ಗುರುವಾರ ಸೂಚಿಸಿದೆ.</p>.<p>ಲೆಟ್ಜ್ಕಿಟ್ ಪ್ರತಿಷ್ಠಾನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ, ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಎಂಟು ಮಂದಿಯ ಪ್ರಕರಣವನ್ನುಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಕ್ರಿಮಿನಲ್ ಪ್ರಕರಣವನ್ನು ಏಕೆ ದಾಖಲಿಸಿಲ್ಲ ಎಂದು ಪ್ರಶ್ನಿಸಿತು. ಈ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತಿರುವುದಾಗಿಯೂ ಹೇಳಿತು.</p>.<p>‘ಮಾಸ್ಕ್ ಧರಿಸುವ ವಿಚಾರದಲ್ಲಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಗಮನಿಸಿದ ನ್ಯಾಯಾಲಯ ಹಲವು ಬಾರಿ ಆದೇಶಗಳನ್ನು ಹೊರಡಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ಉಲ್ಲಂಘನೆಗಳು ನಡೆಯುತ್ತಿದ್ದರೂ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿತು.</p>.<p>ಮಾರ್ಗಸೂಚಿ ಉಲ್ಲಂಘಿಸುವ ರಾಜಕಾರಣಿಗಳು ಮತ್ತು ಅವರ ಬೆಂಬಲಿಗರ ವಿರುದ್ಧ ಅಸಂಜ್ಞೇಯ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡುವುದರ ಹೊರತಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಅಂತಹವರ ವಿರುದ್ಧ ಕ್ರಿಮಿನಲ್ ಕಾಯ್ದೆಗಳನ್ನು ಏಕೆ ಬಳಸಿಲ್ಲ? ಈ ಕುರಿತು ಮುಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರ ವಿವರಣೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿತು.</p>.<p class="Subhead">ವೇತನ ಪಾವತಿಗೆ ಗಡುವು: ಮಾಸ್ಕ್ ಧರಿಸದವರನ್ನು ಪತ್ತೆಹಚ್ಚಿ ದಂಡ ವಿಧಿಸಲು ನೇಮಿಸಿರುವ ಮಾರ್ಷಲ್ಗಳಿಗೆ ಸಕಾಲಕ್ಕೆ ವೇತನನೀಡದಿರುವ ಬಿಬಿಎಂಪಿ ಆಡಳಿತವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. 24 ಗಂಟೆಗಳೊಳಗೆ ಮಾರ್ಷಲ್ಗಳಿಗೆ ವೇತನ ಪಾವತಿಸುವಂತೆ ಗಡುವು ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು<br />ಉಲ್ಲಂಘಿಸಿರುವುದನ್ನು ಒಪ್ಪಿಕೊಂಡಿರುವ ರಾಜಕಾರಣಿಗಳನ್ನು ಶಿಕ್ಷಿಸಲು ಸಿದ್ಧವೇ ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೈಕೋರ್ಟ್ ಗುರುವಾರ ಸೂಚಿಸಿದೆ.</p>.<p>ಲೆಟ್ಜ್ಕಿಟ್ ಪ್ರತಿಷ್ಠಾನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ, ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಎಂಟು ಮಂದಿಯ ಪ್ರಕರಣವನ್ನುಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಕ್ರಿಮಿನಲ್ ಪ್ರಕರಣವನ್ನು ಏಕೆ ದಾಖಲಿಸಿಲ್ಲ ಎಂದು ಪ್ರಶ್ನಿಸಿತು. ಈ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತಿರುವುದಾಗಿಯೂ ಹೇಳಿತು.</p>.<p>‘ಮಾಸ್ಕ್ ಧರಿಸುವ ವಿಚಾರದಲ್ಲಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಗಮನಿಸಿದ ನ್ಯಾಯಾಲಯ ಹಲವು ಬಾರಿ ಆದೇಶಗಳನ್ನು ಹೊರಡಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ಉಲ್ಲಂಘನೆಗಳು ನಡೆಯುತ್ತಿದ್ದರೂ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿತು.</p>.<p>ಮಾರ್ಗಸೂಚಿ ಉಲ್ಲಂಘಿಸುವ ರಾಜಕಾರಣಿಗಳು ಮತ್ತು ಅವರ ಬೆಂಬಲಿಗರ ವಿರುದ್ಧ ಅಸಂಜ್ಞೇಯ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡುವುದರ ಹೊರತಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಅಂತಹವರ ವಿರುದ್ಧ ಕ್ರಿಮಿನಲ್ ಕಾಯ್ದೆಗಳನ್ನು ಏಕೆ ಬಳಸಿಲ್ಲ? ಈ ಕುರಿತು ಮುಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರ ವಿವರಣೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿತು.</p>.<p class="Subhead">ವೇತನ ಪಾವತಿಗೆ ಗಡುವು: ಮಾಸ್ಕ್ ಧರಿಸದವರನ್ನು ಪತ್ತೆಹಚ್ಚಿ ದಂಡ ವಿಧಿಸಲು ನೇಮಿಸಿರುವ ಮಾರ್ಷಲ್ಗಳಿಗೆ ಸಕಾಲಕ್ಕೆ ವೇತನನೀಡದಿರುವ ಬಿಬಿಎಂಪಿ ಆಡಳಿತವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. 24 ಗಂಟೆಗಳೊಳಗೆ ಮಾರ್ಷಲ್ಗಳಿಗೆ ವೇತನ ಪಾವತಿಸುವಂತೆ ಗಡುವು ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>