ಕೊರೊನಾ ವೈರಾಣು ಸೋಂಕಿನ ಮೂರನೇ ಅಲೆ ತಡೆಯುವುದು ಮತ್ತು ಅನಾಥ ಮಕ್ಕಳ ಪೋಷಣೆ ಕುರಿತು ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಕೋವಿಡ್ನಿಂದ ಅನಾಥರಾದ ಮಕ್ಕಳ ಪೋಷಣೆಯ ಹೊಣೆಗಾರಿಕೆ ನಿರ್ವಹಿಸಲು ಅನೇಕ ಮಠಾಧೀಶರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಯಾರಿಂದಲೂ ನೆರವು ದೊರೆಯದಿದ್ದರೆ ಸರ್ಕಾರವೇ ಸಂಪೂರ್ಣ ಹೊಣೆ ಹೊತ್ತುಕೊಳ್ಳಲಿದೆ. ಅದಕ್ಕಾಗಿ ಯೋಜನೆಯೊಂದನ್ನು ಜಾರಿಗೊಳಿಸಲಾಗುವುದು’ ಎಂದರು.