ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಕೇಂದ್ರ ಸರ್ಕಾರದ ನೌಕರರು ಪಡೆಯುತ್ತಿರುವ ವೇತನಕ್ಕೆ ಸಮಾನ ವೇತನ ನೀಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದು, ಆಯೋಗದ ಶಿಫಾರಸು ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ವೇತನ ತಾರತಮ್ಯ ಸರಿಪಡಿಸಲು ಆಯೋಗ ರಚನೆಗೆ ನೌಕರರಿಂದ ಒತ್ತಾಯ ಕೇಳಿಬಂದಿತ್ತು. ಈ ಹಿಂದೆ ಬಜೆಟ್ ಮುನ್ನವೇ ಆಯೋಗ ರಚಬೆ ಬಗ್ಗೆ ತೀರ್ಮಾನಕೈಗೊಳ್ಳುವುದಾಗಿ ಸಿಎಂ ಹೇಳಿದ್ದರು. ಆದರೆ, ಈವರೆಗೆ ಬೇಡಿಕೆ ಈಡೇರಿರಲಿಲ್ಲ.