ಮುಂಬೈನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಕಾಂತ ಪಾಟೀಲ, ‘ಗಡಿ ವಿವಾದದ ಕಾರಣ ತ್ವೇಷಮಯ ವಾತಾವರಣವಿದೆ. ಈಗ ಬರಬೇಡಿ ಎಂದು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮಹಾರಾಷ್ಟ್ರ
ಸರ್ಕಾರಕ್ಕೆ ಪತ್ರ ರವಾನಿಸಿದ್ದಾರೆ. ನಾನು ಯಾರಿಗೂ ಹೆದರುವವನಲ್ಲ. ಅಲ್ಲಿಗೆ ಹೋಗಿಯೇ ಉತ್ತರ ಕೊಡುತ್ತೇನೆ. ಛತ್ರಪತಿ ಶಿವಾಜಿ ಹಾಗೂ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿಯೇ ತೀರುತ್ತೇನೆ’ ಎಂದು ಘೋಷಿಸಿದ್ದಾರೆ.