‘ಅನುಗ್ರಹ’ ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕ ಸಹಕಾರಿ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾಮಂಡಳದ ವತಿಯಂದ ನಗರದ ಮೌರ್ಯ ವೃತ್ತದಲ್ಲಿ ಸೋಮವಾರ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕುರಿಗಳು ಸತ್ತಾಗ ₹ 5,000 ಮತ್ತು ದನ, ಎಮ್ಮೆ ಸತ್ತರೆ ₹ 10,000 ಪರಿಹಾರ ನೀಡುವ ಯೋಜನೆಯನ್ನು ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಯೋಜನೆಯನ್ನು ಸ್ಥಗಿತಗೊಳಿಸಿದೆ. ₹ 30 ಕೋಟಿಯಷ್ಟು ಹಳೆ ಬಾಕಿಯನ್ನೂ ಬಿಡುಗಡೆ ಮಾಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.