ನಗರದಲ್ಲಿ ವಿವಿಧ ಕನ್ನಡ ಸಂಘಟನೆಗಳಿಂದ ಮನವಿ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗಡಿಯಲ್ಲಿ ಈಗ ಪರಿಸ್ಥಿತಿ ಬಿಗಡಾಯಿಸಿದೆ. ಇಂತಹ ವೇಳೆ ಬೆಳಗಾವಿಗೆ ಬಂದರೆ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರಲಿದೆ. ಮೂವರಿಗೆ ಸುರಕ್ಷತೆ ಒದಗಿಸಲು ಕಷ್ಟವಾಗಲಿದೆ. ಹಾಗಾಗಿ ಬೆಳಗಾವಿಗೆ ಬಾರದಿರುವುದೇ ಸೂಕ್ತ ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಹಾಗಾಗಿ ಸಚಿವರು ಮತ್ತು ಸಂಸದ ತಮ್ಮ ನಿರ್ಧಾರದಿಂದ ಹಿಂದೆ ಸರಿಯುತ್ತಾರೆ ಎಂಬ ನಿರೀಕ್ಷೆಯಿದೆ. ಇಷ್ಟಾಗಿಯೂ ಬರಲು ಮುಂದಾದರೆ, ಬೆಳಗಾವಿ ಪ್ರವೇಶಕ್ಕೆ ಬರಲು ಬಿಡುವುದಿಲ್ಲ. 144ನೇ ಕಲಂ ಪ್ರಕಾರ, ನಿಷೇಧಾಜ್ಞೆ ಜಾರಿಗೊಳಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು.