ಚನ್ನಪಟ್ಟಣ: ‘ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರ್ಪಡೆ ಮಾಡಲು ಶಿಫಾರಸು ಮಾಡುವ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಶುಕ್ರವಾರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು
‘ಮೀಸಲಾತಿ ಕಲ್ಪಿಸುವುದು ಹಾಗೂ ನಿಗಮ ರಚನೆ ಮಾಡುವುದು ಅವರವರ ಇಚ್ಛೆ. ಸ್ವಾರ್ಥಕ್ಕಾಗಿ ಮಾಡುತ್ತಿರುವ ವಿವಾದಾತ್ಮಕ ವಿಚಾರಕ್ಕೆ ತಲೆಹಾಕುವುದಿಲ್ಲ’ ಎಂದರು.