ಸೋಮವಾರ ರಾತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೂ ಮೊದಲು ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಿಜೆಪಿಯವರು ಈಗ ಸಹಕಾರ ಕೇಳುತ್ತಾರೆ. ನಂತರ ನಮ್ಮ ವಿರುದ್ಧವೇ ಮಾತನಾಡುತ್ತಾರೆ. ಅವಶ್ಯಕತೆ ಇದ್ದಾಗ ನಮ್ಮನ್ನು ಬಳಸಿಕೊಂಡು ನಂತರ ದೂರುವುದು ಬಿಜೆಪಿಯವರ ಲಕ್ಷಣ. ಈ ಕಾರಣದಿಂದಾಗಿ ಮೈತ್ರಿ ಕುರಿತು ಯಾವುದೇ ನಿರ್ಧಾರ ಮಾಡಿಲ್ಲ’ ಎಂದರು.