ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಹಾಗೂ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ನಡುವಿನ ಮುನಿಸು ಸ್ಪೋಟಗೊಂಡಿದೆ. ‘ಈ ಬಾರಿ ಕ್ಷೇತ್ರದಲ್ಲಿ ರೇವಣ್ಣರಿಗೇ ಟಿಕೆಟ್ ಕೊಡಿ’ ಎಂದು ಬಾಲಕೃಷ್ಣ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ಕಾಂಗ್ರೆಸ್ ತೊರೆಯುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದು, ಇದನ್ನು ಸ್ವತಃ ಅವರೇ ನಿರಾಕರಿಸಿದ್ದಾರೆ.