ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಜಿ. ಕರುಣಾಕರ ರೆಡ್ಡಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ‘ಖುದ್ದಾಗಿ ನಾನು ಟೊಯೊಟಾ ಕಾರ್ಖಾನೆಗೆ ಭೇಟಿ ನೀಡಿ ವಿವಾದ ಇತ್ಯರ್ಥಕ್ಕೆ ಪ್ರಯತ್ನಿಸಿದ್ದೇನೆ. ವಿಧಾನಸೌಧದಲ್ಲಿ ನಡೆಸಿದ ಸಭೆಯಿಂದ ಕಾರ್ಮಿಕ ಮುಖಂಡರು ದೂರ ಉಳಿದರು. 3,415 ಕಾರ್ಮಿಕರ ಪೈಕಿ 1,896 ಮಂದಿ ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ವಿವಾದ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಜತೆಗೂ ಚರ್ಚೆ ನಡೆಸಲಾಗುವುದು’ ಎಂದರು.