ತಂದೆ ಹೋರಾಟದ ಮೂಲಕ ಅಧಿಕಾರಕ್ಕೆ ಬಂದವರು. ಯಾವಾಗಲೂ ಅಭಿವೃದ್ಧಿಯನ್ನೇ ಉಸಿರಾಗಿಸಿಕೊಂಡವರು. ಪಕ್ಷದ ಶಿಸ್ತಿನ ಸಿಪಾಯಿಯಂತೆ ಕರ್ತವ್ಯ ನಿರ್ವಹಿಸಿದ್ದಾರೆ. ಪಕ್ಷಕ್ಕೆ ಸದಾ ನಿಷ್ಠೆ ತೋರಿದ್ದಾರೆ. ಪಕ್ಷ ಎಲ್ಲವನ್ನೂ ನೀಡಿದೆ. ಅವರನ್ನು ಬೆಳೆಸಿ, ಸಂಸ್ಕಾರ ಕಲಿಸಿ, ಮಾರ್ಗದರ್ಶನ ಕೊಟ್ಟಿದೆ. ಹಾಗಾಗಿಯೇ ಅವರು ಇಷ್ಟು ವರ್ಷಗಳು ಜನಹಿತ ಕೆಲಸ ಮಾಡಿದ್ದಾರೆ ಎಂದು ವಿಶ್ಲೇಷಿಸಿದರು.