<p><strong>ಬೆಂಗಳೂರು:</strong> ಹತ್ತು ಎಚ್ಪಿ ಪಂಪ್ಸೆಟ್ವರೆಗಿನ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್ ಈ ವಿಷಯ ಪ್ರಸ್ತಾಪಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಅವರು ‘ಹತ್ತು ಎಚ್ಪಿ ಪಂಪ್ಸೆಟ್ವರೆಗೆ ಸೀಮಿತವಾಗಿ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡಲು ನಮಗೆ ತಕರಾರು ಇಲ್ಲ. ಇದರಿಂದ ದುರುಪಯೋಗ ಆಗಬಾರದು. ಆದ್ದರಿಂದ ಕೆಲವು ನಿಬಂಧನೆಗಳನ್ನು ವಿಧಿಸಲಾಗುವುದು. ಅದನ್ನು ಒಪ್ಪಿಕೊಳ್ಳಬೇಕು’ ಎಂದು ಅವರು ತಿಳಿಸಿದರು.</p>.<p>ರೈತರಿಗೆ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಸರ್ಕಾರದ ಮೇಲೆ ₹14 ಸಾವಿರ ಕೋಟಿಯಷ್ಟು ಹೊರೆ ಇದೆ. ಬಡ ರೈತರಿಗೆಂದು 2008ರಲ್ಲಿ ಸಬ್ಸಿಡಿ ಯೋಜನೆ ಘೋಷಣೆ ಮಾಡಲಾಗಿತ್ತು. ಕಾಫಿ ಬೆಳೆಯುವವರು ಸ್ಥಿತಿವಂತರಿರುತ್ತಾರೆ ಎಂಬ ಕಾರಣಕ್ಕೆ ಆಗ ಸೇರಿಸಿರಲಿಲ್ಲ ಎಂದರು.</p>.<p>ಶಾಸಕರಾದ ಎ.ಟಿ.ರಾಮಸ್ವಾಮಿ, ಸಿ.ಟಿ.ರವಿ. ಎಚ್.ಕೆ.ಕುಮಾರಸ್ವಾಮಿ. ಎಂ.ಪಿ. ಕುಮಾರಸ್ವಾಮಿ, ಕೆ.ಜೆ.ಬೋಪಯ್ಯ ಅವರೂ ವಿದ್ಯುತ್ ಸಬ್ಸಿಡಿಗಾಗಿ ಒತ್ತಾಯಿಸಿದರು.</p>.<p><strong>ಸುನಿಲ್ ತುರ್ತುಸಭೆ:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಹೊರಡಿಸಿದ ಬೆನ್ನಲ್ಲೇ ಇಂಧನ ಸಚಿವ ವಿ.ಸುನಿಲ್ ಕುಮಾರ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಈ ಯೋಜನೆ ವ್ಯಾಪ್ತಿಗೆಬರುವ ಫಲಾನುಭವಿ ರೈತರ ಸಂಖ್ಯೆಯ ಮಾಹಿತಿ ಪಡೆದರು. ರಾಜ್ಯದಲ್ಲಿ ಹತ್ತು ಎಚ್ಪಿ ಪಂಪ್ಸೆಟ್ ಹೊಂದಿರುವ 15 ಸಾವಿರ ಬೆಳೆಗಾರರು ಇದ್ದಾರೆ. ಇವರೆಲ್ಲರನ್ನೂ ಯೋಜನಾ ವ್ಯಾಪ್ತಿಗೆ ಸೇರಿಸಲಾಗುವುದು. ಇದಕ್ಕಾಗಿ ಶೀಘ್ರವೇ ಆದೇಶ ಹೊರಡಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p><strong>ನಾಲೆ ದುರಸ್ತಿಗೆ ಸಹಕರಿಸದ ರೈತರು</strong><br />ಮಂಡ್ಯ ಜಿಲ್ಲೆಯಲ್ಲಿ ವಿಶ್ವೇಶ್ವರಯ್ಯ ನಾಲಾ ಜಾಲದ 2 ನೇ ಹಂತದ ದುರಸ್ತಿ ಕಾಮಗಾರಿಗಳನ್ನು ನಡೆಸಲು ರೈತರು ಸಹಕರಿಸುತ್ತಿಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<p>ಈ ನಾಲೆ ದುರಸ್ತಿಗೆ ಒಂದು ವರ್ಷ ನೀರು ನಿಲ್ಲಿಸಬೇಕಾಗುತ್ತದೆ. ಈ ಭಾಗದ ರೈತರು ಒಂದು ವರ್ಷದ ಮಟ್ಟಿಗೆ ತ್ಯಾಗಕ್ಕೆ ಸಿದ್ಧರಾದರೆ ಕಾಮಗಾರಿ ನಡೆಸಬಹುದು. ಆದರೆ, ರೈತರು ಒಪ್ಪುತ್ತಿಲ್ಲ. ಈ ಕಾಮಗಾರಿ ನಡೆಸಲು ₹300 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಗುತ್ತಿಗೆದಾರರು ಸ್ಥಳಕ್ಕೆ ಹೋದರೆ ಕಾಮಗಾರಿಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.</p>.<p>ಸ್ಥಳೀಯ ಜನಪ್ರತಿನಿಧಿಗಳು ರೈತರ ಮನವೊಲಿಸಬೇಕು. ವಿಧಾನಸಭೆಯಲ್ಲಿ ಶಾಸಕರು ಸರಿಪಡಿಸಿಕೊಡಿ ಎನ್ನುತ್ತಾರೆ. ಅಲ್ಲಿ ಕಾಮಗಾರಿ ಮಾಡಲು ಬಿಡುವುದಿಲ್ಲ. ಈ ರೀತಿ ಆದರೆ ಕಷ್ಟವಾಗುತ್ತದೆ ಎಂದು ಜೆಡಿಎಸ್ನ ಡಿ.ಸಿ.ತಮ್ಮಣ್ಣ ಅವರ ಪ್ರಶ್ನೆಗೆ ಉತ್ತರಿಸಿದರು.</p>.<p><strong>ಸಕಲೇಶಪುರಕ್ಕೆ ಕಿಂಡಿ ಅಣೆಕಟ್ಟೆ</strong><br />ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಕಿಂಡಿ ಅಣೆಕಟ್ಟೆ ಕಟ್ಟಲು ತಾಂತ್ರಿಕವಾಗಿ ಶಕ್ಯವಾಗಿರುವ ಸೂಕ್ತ ಸ್ಥಳಗಳನ್ನು ಗುರುತಿಸಲು ಕ್ರಮ ತೆಗೆದುಕೊಳ್ಳುವುದಾಗಿ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು.</p>.<p>ಸಕಲೇಶಪುರದಲ್ಲಿ ಕಿಂಡಿ ಅಣೆಕಟ್ಟು ಮಾಡುವುದರಿಂದ ಅರಣ್ಯ ಪ್ರದೇಶ ನೀರಿನಲ್ಲಿ ಮುಳುಗಬಹುದು. ಅಲ್ಲದೆ ಆಳವೂ ಹೆಚ್ಚಾಗಿದೆ. ಈ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. ಆದರೂ ಕ್ಷೇತ್ರದ ಶಾಸಕರ ಬೇಡಿಕೆಯನ್ನು ತಳ್ಳಿ ಹಾಕಲು ಆಗುವುದಿಲ್ಲ. ಇದಕ್ಕೆ ಸುಮಾರು ₹8 ಕೋಟಿ ಬೇಕಾಗುತ್ತದೆ. ನಿಮ್ಮ ಬೇಡಿಕೆ ಈಡೇರಿಸುತ್ತೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹತ್ತು ಎಚ್ಪಿ ಪಂಪ್ಸೆಟ್ವರೆಗಿನ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್ ಈ ವಿಷಯ ಪ್ರಸ್ತಾಪಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಅವರು ‘ಹತ್ತು ಎಚ್ಪಿ ಪಂಪ್ಸೆಟ್ವರೆಗೆ ಸೀಮಿತವಾಗಿ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡಲು ನಮಗೆ ತಕರಾರು ಇಲ್ಲ. ಇದರಿಂದ ದುರುಪಯೋಗ ಆಗಬಾರದು. ಆದ್ದರಿಂದ ಕೆಲವು ನಿಬಂಧನೆಗಳನ್ನು ವಿಧಿಸಲಾಗುವುದು. ಅದನ್ನು ಒಪ್ಪಿಕೊಳ್ಳಬೇಕು’ ಎಂದು ಅವರು ತಿಳಿಸಿದರು.</p>.<p>ರೈತರಿಗೆ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಸರ್ಕಾರದ ಮೇಲೆ ₹14 ಸಾವಿರ ಕೋಟಿಯಷ್ಟು ಹೊರೆ ಇದೆ. ಬಡ ರೈತರಿಗೆಂದು 2008ರಲ್ಲಿ ಸಬ್ಸಿಡಿ ಯೋಜನೆ ಘೋಷಣೆ ಮಾಡಲಾಗಿತ್ತು. ಕಾಫಿ ಬೆಳೆಯುವವರು ಸ್ಥಿತಿವಂತರಿರುತ್ತಾರೆ ಎಂಬ ಕಾರಣಕ್ಕೆ ಆಗ ಸೇರಿಸಿರಲಿಲ್ಲ ಎಂದರು.</p>.<p>ಶಾಸಕರಾದ ಎ.ಟಿ.ರಾಮಸ್ವಾಮಿ, ಸಿ.ಟಿ.ರವಿ. ಎಚ್.ಕೆ.ಕುಮಾರಸ್ವಾಮಿ. ಎಂ.ಪಿ. ಕುಮಾರಸ್ವಾಮಿ, ಕೆ.ಜೆ.ಬೋಪಯ್ಯ ಅವರೂ ವಿದ್ಯುತ್ ಸಬ್ಸಿಡಿಗಾಗಿ ಒತ್ತಾಯಿಸಿದರು.</p>.<p><strong>ಸುನಿಲ್ ತುರ್ತುಸಭೆ:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಹೊರಡಿಸಿದ ಬೆನ್ನಲ್ಲೇ ಇಂಧನ ಸಚಿವ ವಿ.ಸುನಿಲ್ ಕುಮಾರ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಈ ಯೋಜನೆ ವ್ಯಾಪ್ತಿಗೆಬರುವ ಫಲಾನುಭವಿ ರೈತರ ಸಂಖ್ಯೆಯ ಮಾಹಿತಿ ಪಡೆದರು. ರಾಜ್ಯದಲ್ಲಿ ಹತ್ತು ಎಚ್ಪಿ ಪಂಪ್ಸೆಟ್ ಹೊಂದಿರುವ 15 ಸಾವಿರ ಬೆಳೆಗಾರರು ಇದ್ದಾರೆ. ಇವರೆಲ್ಲರನ್ನೂ ಯೋಜನಾ ವ್ಯಾಪ್ತಿಗೆ ಸೇರಿಸಲಾಗುವುದು. ಇದಕ್ಕಾಗಿ ಶೀಘ್ರವೇ ಆದೇಶ ಹೊರಡಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p><strong>ನಾಲೆ ದುರಸ್ತಿಗೆ ಸಹಕರಿಸದ ರೈತರು</strong><br />ಮಂಡ್ಯ ಜಿಲ್ಲೆಯಲ್ಲಿ ವಿಶ್ವೇಶ್ವರಯ್ಯ ನಾಲಾ ಜಾಲದ 2 ನೇ ಹಂತದ ದುರಸ್ತಿ ಕಾಮಗಾರಿಗಳನ್ನು ನಡೆಸಲು ರೈತರು ಸಹಕರಿಸುತ್ತಿಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<p>ಈ ನಾಲೆ ದುರಸ್ತಿಗೆ ಒಂದು ವರ್ಷ ನೀರು ನಿಲ್ಲಿಸಬೇಕಾಗುತ್ತದೆ. ಈ ಭಾಗದ ರೈತರು ಒಂದು ವರ್ಷದ ಮಟ್ಟಿಗೆ ತ್ಯಾಗಕ್ಕೆ ಸಿದ್ಧರಾದರೆ ಕಾಮಗಾರಿ ನಡೆಸಬಹುದು. ಆದರೆ, ರೈತರು ಒಪ್ಪುತ್ತಿಲ್ಲ. ಈ ಕಾಮಗಾರಿ ನಡೆಸಲು ₹300 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಗುತ್ತಿಗೆದಾರರು ಸ್ಥಳಕ್ಕೆ ಹೋದರೆ ಕಾಮಗಾರಿಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.</p>.<p>ಸ್ಥಳೀಯ ಜನಪ್ರತಿನಿಧಿಗಳು ರೈತರ ಮನವೊಲಿಸಬೇಕು. ವಿಧಾನಸಭೆಯಲ್ಲಿ ಶಾಸಕರು ಸರಿಪಡಿಸಿಕೊಡಿ ಎನ್ನುತ್ತಾರೆ. ಅಲ್ಲಿ ಕಾಮಗಾರಿ ಮಾಡಲು ಬಿಡುವುದಿಲ್ಲ. ಈ ರೀತಿ ಆದರೆ ಕಷ್ಟವಾಗುತ್ತದೆ ಎಂದು ಜೆಡಿಎಸ್ನ ಡಿ.ಸಿ.ತಮ್ಮಣ್ಣ ಅವರ ಪ್ರಶ್ನೆಗೆ ಉತ್ತರಿಸಿದರು.</p>.<p><strong>ಸಕಲೇಶಪುರಕ್ಕೆ ಕಿಂಡಿ ಅಣೆಕಟ್ಟೆ</strong><br />ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಕಿಂಡಿ ಅಣೆಕಟ್ಟೆ ಕಟ್ಟಲು ತಾಂತ್ರಿಕವಾಗಿ ಶಕ್ಯವಾಗಿರುವ ಸೂಕ್ತ ಸ್ಥಳಗಳನ್ನು ಗುರುತಿಸಲು ಕ್ರಮ ತೆಗೆದುಕೊಳ್ಳುವುದಾಗಿ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು.</p>.<p>ಸಕಲೇಶಪುರದಲ್ಲಿ ಕಿಂಡಿ ಅಣೆಕಟ್ಟು ಮಾಡುವುದರಿಂದ ಅರಣ್ಯ ಪ್ರದೇಶ ನೀರಿನಲ್ಲಿ ಮುಳುಗಬಹುದು. ಅಲ್ಲದೆ ಆಳವೂ ಹೆಚ್ಚಾಗಿದೆ. ಈ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. ಆದರೂ ಕ್ಷೇತ್ರದ ಶಾಸಕರ ಬೇಡಿಕೆಯನ್ನು ತಳ್ಳಿ ಹಾಕಲು ಆಗುವುದಿಲ್ಲ. ಇದಕ್ಕೆ ಸುಮಾರು ₹8 ಕೋಟಿ ಬೇಕಾಗುತ್ತದೆ. ನಿಮ್ಮ ಬೇಡಿಕೆ ಈಡೇರಿಸುತ್ತೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>