ವಿಕಾಸಸೌಧದಲ್ಲಿ ಶುಕ್ರವಾರ ತಮ್ಮ ಅಧಿಕೃತ ಕಚೇರಿಯ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಹುದ್ದೆಯಲ್ಲಿರುವವರ ನೇತೃತ್ವದಲ್ಲೇ ಚುನಾವಣೆ ಎದುರಿಸುವುದು ಸಹಜ ಸಂಗತಿ. ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಬೊಮ್ಮಾಯಿ ಈಗಾಗಲೇ ಹೇಳಿದ್ದಾರೆ. ನಮಗೆ ಗೆಲುವು ಮುಖ್ಯ’ ಎಂದರು.