<p><strong>ಬೆಂಗಳೂರು: </strong>ಓಮೈಕ್ರಾನ್ ತಳಿಯ ಕೊರೊನಾ ವೈರಾಣುವಿನ ತೀವ್ರತೆ ಮತ್ತು ಪರಿಣಾಮಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಓ) ವರದಿ ಪ್ರಕಟವಾದ ಬಳಿಕವೇ ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಓಮೈಕ್ರಾನ್ ತಳಿಯ ವೈರಾಣುವಿನ ಹರಡುವಿಕೆ ಮತ್ತು ಅದರಿಂದ ಆರೋಗ್ಯದ ಮೇಲೆ ಆಗುವ ಹಾನಿ ಕುರಿತು ಈವರೆಗೂ ಅಧ್ಯಯನ ವರದಿ ಪ್ರಕಟವಾಗಿಲ್ಲ. ಡಿಸೆಂಬರ್ 1ರ ವೇಳೆಗೆ ಡಬ್ಲುಎಚ್ಓ ಅಧ್ಯಯನ ವರದಿ ಪ್ರಕಟವಾಗುವ ನಿರೀಕ್ಷೆ ಇದೆ. ಆ ಬಳಿಕವೇ ಹೊಸ ಕ್ರಮಗಳ ಕುರಿತು ಯೋಚಿಸಲಾಗುವುದು ಎಂದರು.</p>.<p>ಶಾಲಾ, ಕಾಲೇಜುಗಳು, ಸಾರ್ವಜನಿಕ ಕಾರ್ಯಕ್ರಮಗಳು ಸೇರಿದಂತೆ ಯಾವುದೇ ಚಟುವಟಿಕೆಯನ್ನು ನಿರ್ಬಂಧಿಸುವ ಪ್ರಸ್ತಾವ ಸದ್ಯಕ್ಕೆ ಇಲ್ಲ. ಕ್ರಿಸ್ಮಸ್, ಹೊಸ ವರ್ಷಾಚರಣೆ, ವಿಧಾನಮಂಡಲದ ಬೆಳಗಾವಿ ಅಧಿವೇಶನ ನಡೆಸುವ ವಿಷಯದಲ್ಲಿ ಬದಲಾವಣೆ ಕುರಿತಂತೆ ಡಬ್ಲ್ಯುಎಚ್ಓ ವರದಿ ಆಧಾರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಮಂಗಳವಾರ ಬೆಳಿಗ್ಗೆ ಲಭಿಸಿರುವ ಮಾಹಿತಿ ಪ್ರಕಾರ, 18 ರಾಷ್ಟ್ರಗಳಲ್ಲಿ ಓಮೈಕ್ರಾನ್ ತಳಿಯ ಕೊರೊನಾ ವೈರಾಣು ಸೋಂಕು ಪತ್ತೆಯಾಗಿದೆ. ಈ ಕಾರಣದಿಂದ ಬೆಂಗಳೂರು ಮತ್ತು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು, ಬಂದರುಗಳ ಜತೆಗೆ ಅಂತರರಾಜ್ಯ ಗಡಿಗಳಲ್ಲಿ ಇನ್ನಷ್ಟು ಕಟ್ಟೆಚ್ಚರ ಅಗತ್ಯವಿದೆ ಎಂದರು.</p>.<p>ಕೋವಿಡ್ ನಿಯಂತ್ರಣ ಕ್ರಮಗಳು ಮತ್ತು ಚಿಕಿತ್ಸಾ ಸಿದ್ಧತೆ ಕುರಿತು ಚರ್ಚಿಸಲು ಇಂದು ಉನ್ನತಮಟ್ಟದ ಸಭೆ ನಡೆಸಲಾಗುವುದು. ಅಂತರರಾಷ್ಟ್ರೀಯ ಪ್ರಯಾಣಿಕರ ಪರೀಕ್ಷೆ, ಸೋಂಕಿತರ ಚಿಕಿತ್ಸೆ ಮತ್ತು ಸೋಂಕಿಲ್ಲದವರ ಕ್ವಾರಂಟೈನ್ ಮಾರ್ಗಸೂಚಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಹಿರಿಯ ಅಧಿಕಾರಿಗಳು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಲ್ಲರ ಜತೆಗೂ ಚರ್ಚಿಸಿ, ವೈಜ್ಞಾನಿಕ ಮಾನದಂಡಗಳ ಆಧಾರದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು.</p>.<p>ದಕ್ಷಿಣ ಆಫ್ರಿಕಾದಿಂದ ಬಂದವರಲ್ಲಿ ಕೋವಿಡ್ ಪತ್ತೆಯಾಗಿರುವ ಇಬ್ಬರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ವಂಶವಾಹಿ ಅನುಕ್ರಮಣಿಕೆ ಅಧ್ಯಯನಕ್ಕಾಗಿ ಕಳುಹಿಸಲಾಗಿದೆ. ಇನ್ನೂ ವರದಿ ಬಂದಿಲ್ಲ. ವರದಿ ಬಂದ ಬಳಿಕ ಸ್ಪಷ್ಟವಾಗಲಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಓಮೈಕ್ರಾನ್ ತಳಿಯ ಕೊರೊನಾ ವೈರಾಣುವಿನ ತೀವ್ರತೆ ಮತ್ತು ಪರಿಣಾಮಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಓ) ವರದಿ ಪ್ರಕಟವಾದ ಬಳಿಕವೇ ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಓಮೈಕ್ರಾನ್ ತಳಿಯ ವೈರಾಣುವಿನ ಹರಡುವಿಕೆ ಮತ್ತು ಅದರಿಂದ ಆರೋಗ್ಯದ ಮೇಲೆ ಆಗುವ ಹಾನಿ ಕುರಿತು ಈವರೆಗೂ ಅಧ್ಯಯನ ವರದಿ ಪ್ರಕಟವಾಗಿಲ್ಲ. ಡಿಸೆಂಬರ್ 1ರ ವೇಳೆಗೆ ಡಬ್ಲುಎಚ್ಓ ಅಧ್ಯಯನ ವರದಿ ಪ್ರಕಟವಾಗುವ ನಿರೀಕ್ಷೆ ಇದೆ. ಆ ಬಳಿಕವೇ ಹೊಸ ಕ್ರಮಗಳ ಕುರಿತು ಯೋಚಿಸಲಾಗುವುದು ಎಂದರು.</p>.<p>ಶಾಲಾ, ಕಾಲೇಜುಗಳು, ಸಾರ್ವಜನಿಕ ಕಾರ್ಯಕ್ರಮಗಳು ಸೇರಿದಂತೆ ಯಾವುದೇ ಚಟುವಟಿಕೆಯನ್ನು ನಿರ್ಬಂಧಿಸುವ ಪ್ರಸ್ತಾವ ಸದ್ಯಕ್ಕೆ ಇಲ್ಲ. ಕ್ರಿಸ್ಮಸ್, ಹೊಸ ವರ್ಷಾಚರಣೆ, ವಿಧಾನಮಂಡಲದ ಬೆಳಗಾವಿ ಅಧಿವೇಶನ ನಡೆಸುವ ವಿಷಯದಲ್ಲಿ ಬದಲಾವಣೆ ಕುರಿತಂತೆ ಡಬ್ಲ್ಯುಎಚ್ಓ ವರದಿ ಆಧಾರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಮಂಗಳವಾರ ಬೆಳಿಗ್ಗೆ ಲಭಿಸಿರುವ ಮಾಹಿತಿ ಪ್ರಕಾರ, 18 ರಾಷ್ಟ್ರಗಳಲ್ಲಿ ಓಮೈಕ್ರಾನ್ ತಳಿಯ ಕೊರೊನಾ ವೈರಾಣು ಸೋಂಕು ಪತ್ತೆಯಾಗಿದೆ. ಈ ಕಾರಣದಿಂದ ಬೆಂಗಳೂರು ಮತ್ತು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು, ಬಂದರುಗಳ ಜತೆಗೆ ಅಂತರರಾಜ್ಯ ಗಡಿಗಳಲ್ಲಿ ಇನ್ನಷ್ಟು ಕಟ್ಟೆಚ್ಚರ ಅಗತ್ಯವಿದೆ ಎಂದರು.</p>.<p>ಕೋವಿಡ್ ನಿಯಂತ್ರಣ ಕ್ರಮಗಳು ಮತ್ತು ಚಿಕಿತ್ಸಾ ಸಿದ್ಧತೆ ಕುರಿತು ಚರ್ಚಿಸಲು ಇಂದು ಉನ್ನತಮಟ್ಟದ ಸಭೆ ನಡೆಸಲಾಗುವುದು. ಅಂತರರಾಷ್ಟ್ರೀಯ ಪ್ರಯಾಣಿಕರ ಪರೀಕ್ಷೆ, ಸೋಂಕಿತರ ಚಿಕಿತ್ಸೆ ಮತ್ತು ಸೋಂಕಿಲ್ಲದವರ ಕ್ವಾರಂಟೈನ್ ಮಾರ್ಗಸೂಚಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಹಿರಿಯ ಅಧಿಕಾರಿಗಳು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಲ್ಲರ ಜತೆಗೂ ಚರ್ಚಿಸಿ, ವೈಜ್ಞಾನಿಕ ಮಾನದಂಡಗಳ ಆಧಾರದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು.</p>.<p>ದಕ್ಷಿಣ ಆಫ್ರಿಕಾದಿಂದ ಬಂದವರಲ್ಲಿ ಕೋವಿಡ್ ಪತ್ತೆಯಾಗಿರುವ ಇಬ್ಬರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ವಂಶವಾಹಿ ಅನುಕ್ರಮಣಿಕೆ ಅಧ್ಯಯನಕ್ಕಾಗಿ ಕಳುಹಿಸಲಾಗಿದೆ. ಇನ್ನೂ ವರದಿ ಬಂದಿಲ್ಲ. ವರದಿ ಬಂದ ಬಳಿಕ ಸ್ಪಷ್ಟವಾಗಲಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>