<p><strong>ಬೆಂಗಳೂರು</strong>: ‘ಹಿಂದಿನ ಅವಧಿಯಲ್ಲಿ ಸಹಕಾರ ಸಚಿವನಾಗಿ ನಾನು ಮಾಡಿದ್ದ ಕೆಲಸವನ್ನು ಆಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮತ್ತೆ ಅದೇ ಖಾತೆ ನೀಡಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ರೈತರ ಪರವಾಗಿ ಮತ್ತಷ್ಟು ಕೆಲಸ ಮಾಡುತ್ತೇನೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.</p>.<p>ಶನಿವಾರ ಖಾತೆ ಹಂಚಿಕೆ ಬಳಿಕ ಪ್ರತಿಕ್ರಿಯಿಸಿರುವ ಅವರು, ‘ಸಹಕಾರ ಖಾತೆ ನೇರವಾಗಿ ರೈತರಿಗೆ ಸಂಬಂಧಿಸಿದ್ದು. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಹಕಾರ ಇಲಾಖೆಯ ಮೂಲಕ 30 ಲಕ್ಷ ರೈತರಿಗೆ ₹ 20,810 ಕೋಟಿ ಸಾಲ ನೀಡುವ ಗುರಿ ಇದೆ. ಈವರೆಗೆ 8.39 ಲಕ್ಷ ರೈತರಿಗೆ ₹ 6,318 ಕೋಟಿ ಸಾಲ ವಿತರಿಸಲಾಗಿದೆ. ಸಂಪೂರ್ಣವಾಗಿ ಗುರಿ ಸಾಧಿಸಲು ಪ್ರಯತ್ನಿಸುತ್ತೇನೆ’ ಎಂದಿದ್ದಾರೆ.</p>.<p>ನಿಯಮಿತವಾಗಿ ಸಹಕಾರ ಬ್ಯಾಂಕ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಹೊಸ ರೈತರಿಗೆ ಸಾಲ ನೀಡುವ ಮೂಲಕ ಅವರನ್ನು ಸಹಕಾರ ಸಂಸ್ಥೆಗಳ ವ್ಯಾಪ್ತಿಗೆ ತರಲಾಗುವುದು. ರಾಜ್ಯದ ರೈತರ ಅಭಿವೃದ್ಧಿಗೆ ಪೂರಕವಾಗಿ ಈ ಅವಕಾಶವನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹಿಂದಿನ ಅವಧಿಯಲ್ಲಿ ಸಹಕಾರ ಸಚಿವನಾಗಿ ನಾನು ಮಾಡಿದ್ದ ಕೆಲಸವನ್ನು ಆಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮತ್ತೆ ಅದೇ ಖಾತೆ ನೀಡಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ರೈತರ ಪರವಾಗಿ ಮತ್ತಷ್ಟು ಕೆಲಸ ಮಾಡುತ್ತೇನೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.</p>.<p>ಶನಿವಾರ ಖಾತೆ ಹಂಚಿಕೆ ಬಳಿಕ ಪ್ರತಿಕ್ರಿಯಿಸಿರುವ ಅವರು, ‘ಸಹಕಾರ ಖಾತೆ ನೇರವಾಗಿ ರೈತರಿಗೆ ಸಂಬಂಧಿಸಿದ್ದು. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಹಕಾರ ಇಲಾಖೆಯ ಮೂಲಕ 30 ಲಕ್ಷ ರೈತರಿಗೆ ₹ 20,810 ಕೋಟಿ ಸಾಲ ನೀಡುವ ಗುರಿ ಇದೆ. ಈವರೆಗೆ 8.39 ಲಕ್ಷ ರೈತರಿಗೆ ₹ 6,318 ಕೋಟಿ ಸಾಲ ವಿತರಿಸಲಾಗಿದೆ. ಸಂಪೂರ್ಣವಾಗಿ ಗುರಿ ಸಾಧಿಸಲು ಪ್ರಯತ್ನಿಸುತ್ತೇನೆ’ ಎಂದಿದ್ದಾರೆ.</p>.<p>ನಿಯಮಿತವಾಗಿ ಸಹಕಾರ ಬ್ಯಾಂಕ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಹೊಸ ರೈತರಿಗೆ ಸಾಲ ನೀಡುವ ಮೂಲಕ ಅವರನ್ನು ಸಹಕಾರ ಸಂಸ್ಥೆಗಳ ವ್ಯಾಪ್ತಿಗೆ ತರಲಾಗುವುದು. ರಾಜ್ಯದ ರೈತರ ಅಭಿವೃದ್ಧಿಗೆ ಪೂರಕವಾಗಿ ಈ ಅವಕಾಶವನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>