ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮೇಶ ಜಾರಕಿಹೊಳಿ | ಸಿ.ಡಿ.ಯಲ್ಲಿರುವ ಯುವತಿಯ ಅಪಹರಣ ದೂರು: ತನಿಖಾ ತಂಡ ರಚನೆ

Last Updated 17 ಮಾರ್ಚ್ 2021, 6:44 IST
ಅಕ್ಷರ ಗಾತ್ರ

ಬೆಳಗಾವಿ: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ.ಯಲ್ಲಿರುವ ಯುವತಿಯ ಅಪಹರಣವಾಗಿದ್ದು, ಹುಡುಕಿಕೊಡುವಂತೆ ಅವರ ತಂದೆ ದೂರು ನೀಡಿರುವ ಹಿನ್ನೆಲೆಯಲ್ಲಿ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದರು.

ಮಾರ್ಕೆಟ್ ಎಸಿಪಿ ಹಾಗೂ ಎಪಿಎಂಸಿ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಎಫ್ ಐ ಆರ್ ದಾಖಲಾಗಿದೆ. ಭದ್ರತೆ ನೀಡುವಂತೆ ಕೋರಿದ್ದರೆ, ವ್ಯಾಪ್ತಿಯ ಪೊಲೀಸ್ ಠಾಣೆ ಪೊಲೀಸರು ನಿರ್ಧರಿಸುತ್ತಾರೆ ಎಂದು ಹೇಳಿದರು.

ತಂಡವು ಯುವತಿಯ ಹುಡುಕಾಟಕ್ಕಾಗಿ ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ. ಮಗಳ ಅಪಹರಣವಾಗಿದೆ ಎಂದು ತಂದೆ ಮಂಗಳವಾರವಷ್ಟೆ ಎಪಿಎಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನು ಆಧರಿಸಿ ತನಿಖೆ ಆರಂಭಿಸಲಾಗಿದೆ.

ಯುವತಿಯ ಕುಟುಂಬದವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT