<p><strong>ಕಲಬುರ್ಗಿ: </strong>25 ವರ್ಷದಿಂದ ಪಕ್ಷದಲ್ಲಿ ದುಡಿದು ನಾನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಡರೂ, ನನಗೆ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಸಾವಿತ್ರಿ ಕುಳಗೇರಿ ಕಣ್ಣೀರುಸುರಿಸಿದ್ದಾರೆ.</p>.<p>ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಕಾರ್ಯಕರ್ತರ ಸಭೆ ಮುಗಿದ ಬಳಿಕ, ಸಚಿವೆ ಶೋಭಾ ಅವರಿಗೆ ಶಾಲು ಹೊದಿಸುವ ಸಂದರ್ಭದಲ್ಲಿ ಭಾವುಕರಾಗಿ ತಮ್ಮ ಅಳಲನ್ನು ತೊಡಿಕೊಂಡರು.</p>.<p>ಶುಕ್ರವಾರ ನಡೆದ ಮಹಾನಗರ ಪಾಲಿಕೆ ಚುನಾವಣೆಗೆ ವಾರ್ಡ್ ನಂ- 31ರ ಬಿಜೆಪಿ ಟಿಕೆಟ್ ಕೇಳಿದ್ದೆ. ಆದರೆ ನನಗೆ ದೊರಕಿಲ್ಲ ಎಂದು ಸಚಿವೆ ಶೋಭಾ ಕರಂದ್ಲಾಜೆ ಎದುರಿಗೆ ಹೇಳಿಕೊಂಡರು.</p>.<p>ಮೊನ್ನೆ ಮೊನ್ನೆ ಬಂದವರಿಗೆ ನಿಗಮ ಮಂಡಳಿ ಸ್ಥಾನವನ್ನು ನೀಡಿದ್ದರಿಂದ ದಶಕಗಳಿಂದ ಪಕ್ಷದ ಸಂಘಟನೆಗಾಗಿ ದುಡಿದವರಿಗೆ ನೋವುಂಟಾಗಿದೆ ಎಂದು ಹೇಳಿದರು.</p>.<p>ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಮುಂಬರುವ ದಿನಗಳಲ್ಲಿ ನನಗೆ ಸೂಕ್ತ ಸ್ಥಾನಮಾನ ಕೊಡುವ ಬಗ್ಗೆ ಭರವಸೆ ನೀಡಿದ್ದು, ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡುವುದಾಗಿ ಸಾವಿತ್ರಿ ತಿಳಿಸಿದ್ದಾರೆ.</p>.<p>ಮಹಿಳಾ ಕಾರ್ಯಕರ್ತರು ಕಣ್ಣೀರಿಟ್ಟು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದರೂ ಅವರನ್ನು ಸಮಾಧಾನ ಹೇಳುವ ಬದಲು ಸಚಿವೆ ಶೋಭಾ ವೇದಿಕೆಯಿಂದ ನಿರ್ಗಮಿಸಿದರು.</p>.<p>ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಬಿಜೆಪಿ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>25 ವರ್ಷದಿಂದ ಪಕ್ಷದಲ್ಲಿ ದುಡಿದು ನಾನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಡರೂ, ನನಗೆ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಸಾವಿತ್ರಿ ಕುಳಗೇರಿ ಕಣ್ಣೀರುಸುರಿಸಿದ್ದಾರೆ.</p>.<p>ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಕಾರ್ಯಕರ್ತರ ಸಭೆ ಮುಗಿದ ಬಳಿಕ, ಸಚಿವೆ ಶೋಭಾ ಅವರಿಗೆ ಶಾಲು ಹೊದಿಸುವ ಸಂದರ್ಭದಲ್ಲಿ ಭಾವುಕರಾಗಿ ತಮ್ಮ ಅಳಲನ್ನು ತೊಡಿಕೊಂಡರು.</p>.<p>ಶುಕ್ರವಾರ ನಡೆದ ಮಹಾನಗರ ಪಾಲಿಕೆ ಚುನಾವಣೆಗೆ ವಾರ್ಡ್ ನಂ- 31ರ ಬಿಜೆಪಿ ಟಿಕೆಟ್ ಕೇಳಿದ್ದೆ. ಆದರೆ ನನಗೆ ದೊರಕಿಲ್ಲ ಎಂದು ಸಚಿವೆ ಶೋಭಾ ಕರಂದ್ಲಾಜೆ ಎದುರಿಗೆ ಹೇಳಿಕೊಂಡರು.</p>.<p>ಮೊನ್ನೆ ಮೊನ್ನೆ ಬಂದವರಿಗೆ ನಿಗಮ ಮಂಡಳಿ ಸ್ಥಾನವನ್ನು ನೀಡಿದ್ದರಿಂದ ದಶಕಗಳಿಂದ ಪಕ್ಷದ ಸಂಘಟನೆಗಾಗಿ ದುಡಿದವರಿಗೆ ನೋವುಂಟಾಗಿದೆ ಎಂದು ಹೇಳಿದರು.</p>.<p>ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಮುಂಬರುವ ದಿನಗಳಲ್ಲಿ ನನಗೆ ಸೂಕ್ತ ಸ್ಥಾನಮಾನ ಕೊಡುವ ಬಗ್ಗೆ ಭರವಸೆ ನೀಡಿದ್ದು, ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡುವುದಾಗಿ ಸಾವಿತ್ರಿ ತಿಳಿಸಿದ್ದಾರೆ.</p>.<p>ಮಹಿಳಾ ಕಾರ್ಯಕರ್ತರು ಕಣ್ಣೀರಿಟ್ಟು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದರೂ ಅವರನ್ನು ಸಮಾಧಾನ ಹೇಳುವ ಬದಲು ಸಚಿವೆ ಶೋಭಾ ವೇದಿಕೆಯಿಂದ ನಿರ್ಗಮಿಸಿದರು.</p>.<p>ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಬಿಜೆಪಿ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>