‘ಪೋಷಣೆ ಟ್ರ್ಯಾಕರ್ ಅಳವಡಿಕೆ, ಸಮುದಾಯ ಆಧಾರಿತ ಕಾರ್ಯಕ್ರಮಗಳು, ತರಬೇತಿ ಕಾರ್ಯಕ್ರಮ ಕುರಿತಂತೆ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ನೀಡಿರುವ ಸ್ಮಾರ್ಟ್ ಫೋನ್ ಸಮಸ್ಯೆ ಕುರಿತು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಸಮಸ್ಯೆಯ ಬಗ್ಗೆ ಲಿಖಿತ ರೂಪದಲ್ಲಿ ಆಯುಕ್ತರಿಗೆ ಮಾಹಿತಿ ನೀಡಿದರೆ ಸಂಬಂಧಪಟ್ಟ ಕಂಪನಿಗಳ ಜೊತೆಗೆ ಮಾತನಾಡಿ, ಸಮಸ್ಯೆ ಬಗೆಹರಿಸಲಾಗುವುದು ಎಂದೂ ಅವರು ಭರವಸೆ ನೀಡಿದರು.