<p><strong>ಬೆಂಗಳೂರು:</strong>ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದ್ದು, ಕಾಂಗ್ರೆಸ್, ಜೆಡಿಎಸ್ ಹಾಗೂ ವಿವಿಧ ಸಂಘ–ಸಂಸ್ಥೆಗಳು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿಮಂಗಳವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ, ಬಸವರಾಜ ಹೊರಟ್ಟಿಪಾಲ್ಗೊಂಡಿದ್ದರು.</p>.<p>ಸಿದ್ದರಾಮಯ್ಯ ಮಾತನಾಡಿ, ರೈತರು, ಬಡವರಿಗೆ ಅನುಕೂಲ ಆಗಲಿ ಎಂಬ ಕಾರಣಕ್ಕೆ ದೇವರಾಜ ಅರಸು ಅವರು ‘ಉಳುವವನೆ ಹೊಲದೊಡೆಯ’ ಕಾನೂನು ಜಾರಿಗೆ ತಂದರು. ಈಗನ ರಾಜ್ಯ ಮತ್ತು ಕೇಂದ್ರ ಸರ್ಕಾರ ದುಡ್ಡಿದ್ದವರನ್ನು ಹೊಲದೊಡೆಯರನ್ನಾಗಿ ಮಾಡಲು ಹೊರಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮೈಸೂರು ಭಾಗದಲ್ಲಿ ಈ ಹಿಂದೆ ರೈತರು ಉಳ್ಳವರಿಗೆ ಭೂಮಿ ನೀಡಿದರು. ಈಗ ಅವರು ತಮ್ಮ ಜಮೀನಿಗೇ ಕೂಲಿ ಕೆಲಸಗಾರರಾಗಿ ಹೋಗುತ್ತಿದ್ದಾರೆ. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರಿ ಧೋರಣೆ ವಿರುದ್ಧ ಕೇಂದ್ರದಲ್ಲೀಗ ಸಂಘರ್ಷ ನಡೆಯುತ್ತಿದೆ. ರಾಜ್ಯಗಳ ಸ್ವಾಯತ್ತತೆ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ.ಸರ್ವಾಧಿಕಾರದ ಧೋರಣೆಯಿಂದ ನಮ್ಮೆಲ್ಲರ ಧ್ವನಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡಬಾರದು’ ಎಂದರು.</p>.<p>‘ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ಸದನದಲ್ಲಿ ಹೋರಾಟ ನಡೆಸುತ್ತೇವೆ. ವಿಧಾನ ಪರಿಷತ್ತಿನಲ್ಲಿ ಮಸೂದೆ ಅಂಗೀಕಾರ ಆಗದಂತೆ ನೋಡಿಕೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಶಾಸಕ ಎಚ್.ಡಿ. ರೇವಣ್ಣ ಮಾತನಾಡಿ, ‘ಈ ಮಸೂದೆಗಳ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ರೈತರ ಪರವಾಗಿ ಪಕ್ಷ ಹೋರಾಟ ನಡೆಸಲಿದೆ’ ಎಂದು ಹೇಳಿದರು.</p>.<p><strong>ಜೆಡಿಎಸ್ ಜತೆ ಚರ್ಚೆ: ಡಿ.ಕೆ.ಶಿವಕುಮಾರ್</strong><br />ರೈತ ವಿರೋಧಿ ಮಸೂದೆಗಳು ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದಂತೆ ತಡೆಯಲು ಜೆಡಿಎಸ್ ವರಿಷ್ಠರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತವಿದೆ. ವಿಧಾನ ಪರಿಷತ್ತಿನಲ್ಲಿ ಬಹುಮತ ಇಲ್ಲ. ಭೂಸುಧಾರಣೆ ಮಸೂದೆ ಅಲ್ಲಿ ಒಪ್ಪಿಗೆ ಸಿಗದಂತೆ ನೋಡಿಕೊಳ್ಳಲಾಗುವುದು ಎಂದರು.</p>.<p>‘ರೈತರ ಬಗ್ಗೆ ಕಾಳಜಿ ಇಲ್ಲದ ಕೃಷಿ ಸಚಿವರು ಈ ಹೋರಾಟ ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದಾರೆ. ರೈತರ ಹೆಸರಿನಲ್ಲಿ ಅಧಿಕಾರ ಹಿಡಿದಿರುವ ಬಿ.ಎಸ್. ಯಡಿಯೂರಪ್ಪ ಅವರು ರೈತರಿಗೆ ಮಾರಕವಾದ ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದಾರೆ’ ಎಂದು ದೂರಿದರು.</p>.<p><strong>ಬಂದ್ ಬಗ್ಗೆ ನಿರ್ಧಾರ ಇಂದು</strong><br />ಭೂಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಸೆ.25 ರಂದು ಕರೆ ನೀಡಿರುವ ಬಂದ್ಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದರು.</p>.<p>‘ಬಂದ್ ನಡೆಸಬೇಕೆ, ನಡೆಸಿದರೆ ಯಾವ ಸ್ವರೂಪದಲ್ಲಿ ಇರಬೇಕು ಎಂಬುದರ ಕುರಿತು ಎಲ್ಲಾ ಸಂಘಟನೆಗಳ ಜತೆ ಚರ್ಚೆ ನಡೆಸಿ ಬುಧವಾರ ತೀರ್ಮಾನ ಪ್ರಕಟಿಸಲಾಗುವುದು’ ಎಂದು ಹೇಳಿದರು.</p>.<p><strong>ಕಬ್ಬುಬೆಳೆಗಾರರ ಪ್ರತಿಭಟನೆ</strong><br />ಸ್ವಾತಂತ್ರ್ಯ ಉದ್ಯಾನದಲ್ಲಿ ಐಕ್ಯ ಹೋರಾಟ ನಡೆಯುತ್ತಿದ್ದರೆ, ಎದುರಿನ ರಸ್ತೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಬಂದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು, ‘ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು. ಕೂಡಲೇ ಕಬ್ಬು ಬೆಳೆಗಾರರ ಸಭೆ ಕರೆಯಲು ಮನವಿ ಮಾಡಲಾಗುವುದು’ ಎಂದು ತಿಳಿಸಿದರು.</p>.<p><strong>ಮುಂದುವರಿದ ಪ್ರತ್ಯೇಕ ಪ್ರತಿಭಟನೆ</strong><br />ಮತ್ತೊಂದೆಡೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿಯೂ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಧರಣಿ ಮುಂದುವರಿಸಿದ್ದಾರೆ.</p>.<p>‘ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯದೆ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.</p>.<p><strong>ರೈತರಒತ್ತಾಯಗಳು</strong><br />*ಬಡ ಜನರನ್ನು (ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡದೆ) ಅವರ ಭೂಮಿಯಿಂದಾಗಲೀ, ಮನೆಗಳಿಂದಾಗಲೀ ಒಕ್ಕಲೆಬ್ಬಿಸಬಾರದು.</p>.<p>*ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದೊಳಗೆ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು.</p>.<p>*ಒಟ್ಟು ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಲಭ್ಯವಿರುವ ಭೂಮಿಯನ್ನು ನಿವೇಶನಕ್ಕಾಗಿ ಮತ್ತು ಉಳುಮೆಗಾಗಿ ವಿತರಣೆ ಮಾಡಬೇಕು.</p>.<p>* ರೈತ, ದಲಿತ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಕೂಡಲೇ ರದ್ದುಪಡಿಸಬೇಕು.</p>.<p>*ಕೊರೊನಾದಿಂದ ತತ್ತರಿಸುವ ರೈತರ ಮತ್ತು ಕಾರ್ಮಿಕರ ನೆರವಿಗೆ ಸರ್ಕಾರ ಸಮಗ್ರ ಪ್ಯಾಕೇಜ್ ಘೋಷಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದ್ದು, ಕಾಂಗ್ರೆಸ್, ಜೆಡಿಎಸ್ ಹಾಗೂ ವಿವಿಧ ಸಂಘ–ಸಂಸ್ಥೆಗಳು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿಮಂಗಳವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ, ಬಸವರಾಜ ಹೊರಟ್ಟಿಪಾಲ್ಗೊಂಡಿದ್ದರು.</p>.<p>ಸಿದ್ದರಾಮಯ್ಯ ಮಾತನಾಡಿ, ರೈತರು, ಬಡವರಿಗೆ ಅನುಕೂಲ ಆಗಲಿ ಎಂಬ ಕಾರಣಕ್ಕೆ ದೇವರಾಜ ಅರಸು ಅವರು ‘ಉಳುವವನೆ ಹೊಲದೊಡೆಯ’ ಕಾನೂನು ಜಾರಿಗೆ ತಂದರು. ಈಗನ ರಾಜ್ಯ ಮತ್ತು ಕೇಂದ್ರ ಸರ್ಕಾರ ದುಡ್ಡಿದ್ದವರನ್ನು ಹೊಲದೊಡೆಯರನ್ನಾಗಿ ಮಾಡಲು ಹೊರಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮೈಸೂರು ಭಾಗದಲ್ಲಿ ಈ ಹಿಂದೆ ರೈತರು ಉಳ್ಳವರಿಗೆ ಭೂಮಿ ನೀಡಿದರು. ಈಗ ಅವರು ತಮ್ಮ ಜಮೀನಿಗೇ ಕೂಲಿ ಕೆಲಸಗಾರರಾಗಿ ಹೋಗುತ್ತಿದ್ದಾರೆ. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರಿ ಧೋರಣೆ ವಿರುದ್ಧ ಕೇಂದ್ರದಲ್ಲೀಗ ಸಂಘರ್ಷ ನಡೆಯುತ್ತಿದೆ. ರಾಜ್ಯಗಳ ಸ್ವಾಯತ್ತತೆ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ.ಸರ್ವಾಧಿಕಾರದ ಧೋರಣೆಯಿಂದ ನಮ್ಮೆಲ್ಲರ ಧ್ವನಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡಬಾರದು’ ಎಂದರು.</p>.<p>‘ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ಸದನದಲ್ಲಿ ಹೋರಾಟ ನಡೆಸುತ್ತೇವೆ. ವಿಧಾನ ಪರಿಷತ್ತಿನಲ್ಲಿ ಮಸೂದೆ ಅಂಗೀಕಾರ ಆಗದಂತೆ ನೋಡಿಕೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಶಾಸಕ ಎಚ್.ಡಿ. ರೇವಣ್ಣ ಮಾತನಾಡಿ, ‘ಈ ಮಸೂದೆಗಳ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ರೈತರ ಪರವಾಗಿ ಪಕ್ಷ ಹೋರಾಟ ನಡೆಸಲಿದೆ’ ಎಂದು ಹೇಳಿದರು.</p>.<p><strong>ಜೆಡಿಎಸ್ ಜತೆ ಚರ್ಚೆ: ಡಿ.ಕೆ.ಶಿವಕುಮಾರ್</strong><br />ರೈತ ವಿರೋಧಿ ಮಸೂದೆಗಳು ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದಂತೆ ತಡೆಯಲು ಜೆಡಿಎಸ್ ವರಿಷ್ಠರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತವಿದೆ. ವಿಧಾನ ಪರಿಷತ್ತಿನಲ್ಲಿ ಬಹುಮತ ಇಲ್ಲ. ಭೂಸುಧಾರಣೆ ಮಸೂದೆ ಅಲ್ಲಿ ಒಪ್ಪಿಗೆ ಸಿಗದಂತೆ ನೋಡಿಕೊಳ್ಳಲಾಗುವುದು ಎಂದರು.</p>.<p>‘ರೈತರ ಬಗ್ಗೆ ಕಾಳಜಿ ಇಲ್ಲದ ಕೃಷಿ ಸಚಿವರು ಈ ಹೋರಾಟ ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದಾರೆ. ರೈತರ ಹೆಸರಿನಲ್ಲಿ ಅಧಿಕಾರ ಹಿಡಿದಿರುವ ಬಿ.ಎಸ್. ಯಡಿಯೂರಪ್ಪ ಅವರು ರೈತರಿಗೆ ಮಾರಕವಾದ ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದಾರೆ’ ಎಂದು ದೂರಿದರು.</p>.<p><strong>ಬಂದ್ ಬಗ್ಗೆ ನಿರ್ಧಾರ ಇಂದು</strong><br />ಭೂಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಸೆ.25 ರಂದು ಕರೆ ನೀಡಿರುವ ಬಂದ್ಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದರು.</p>.<p>‘ಬಂದ್ ನಡೆಸಬೇಕೆ, ನಡೆಸಿದರೆ ಯಾವ ಸ್ವರೂಪದಲ್ಲಿ ಇರಬೇಕು ಎಂಬುದರ ಕುರಿತು ಎಲ್ಲಾ ಸಂಘಟನೆಗಳ ಜತೆ ಚರ್ಚೆ ನಡೆಸಿ ಬುಧವಾರ ತೀರ್ಮಾನ ಪ್ರಕಟಿಸಲಾಗುವುದು’ ಎಂದು ಹೇಳಿದರು.</p>.<p><strong>ಕಬ್ಬುಬೆಳೆಗಾರರ ಪ್ರತಿಭಟನೆ</strong><br />ಸ್ವಾತಂತ್ರ್ಯ ಉದ್ಯಾನದಲ್ಲಿ ಐಕ್ಯ ಹೋರಾಟ ನಡೆಯುತ್ತಿದ್ದರೆ, ಎದುರಿನ ರಸ್ತೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಬಂದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು, ‘ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು. ಕೂಡಲೇ ಕಬ್ಬು ಬೆಳೆಗಾರರ ಸಭೆ ಕರೆಯಲು ಮನವಿ ಮಾಡಲಾಗುವುದು’ ಎಂದು ತಿಳಿಸಿದರು.</p>.<p><strong>ಮುಂದುವರಿದ ಪ್ರತ್ಯೇಕ ಪ್ರತಿಭಟನೆ</strong><br />ಮತ್ತೊಂದೆಡೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿಯೂ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಧರಣಿ ಮುಂದುವರಿಸಿದ್ದಾರೆ.</p>.<p>‘ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯದೆ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.</p>.<p><strong>ರೈತರಒತ್ತಾಯಗಳು</strong><br />*ಬಡ ಜನರನ್ನು (ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡದೆ) ಅವರ ಭೂಮಿಯಿಂದಾಗಲೀ, ಮನೆಗಳಿಂದಾಗಲೀ ಒಕ್ಕಲೆಬ್ಬಿಸಬಾರದು.</p>.<p>*ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದೊಳಗೆ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು.</p>.<p>*ಒಟ್ಟು ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಲಭ್ಯವಿರುವ ಭೂಮಿಯನ್ನು ನಿವೇಶನಕ್ಕಾಗಿ ಮತ್ತು ಉಳುಮೆಗಾಗಿ ವಿತರಣೆ ಮಾಡಬೇಕು.</p>.<p>* ರೈತ, ದಲಿತ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಕೂಡಲೇ ರದ್ದುಪಡಿಸಬೇಕು.</p>.<p>*ಕೊರೊನಾದಿಂದ ತತ್ತರಿಸುವ ರೈತರ ಮತ್ತು ಕಾರ್ಮಿಕರ ನೆರವಿಗೆ ಸರ್ಕಾರ ಸಮಗ್ರ ಪ್ಯಾಕೇಜ್ ಘೋಷಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>