ಪೊಲೀಸ್ ಇಲಾಖೆ ಮಾದರಿಯಲ್ಲಿ ಕರ್ನಾಟಕ ಅರಣ್ಯ ಇಲಾಖೆಯಲ್ಲೂ ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು ಇತ್ಯಾದಿ ಕೆಲಸಗಳಲ್ಲಿ ಗಣನೀಯ ಸಾಧನೆ ಮಾಡಿದ ಅರ್ಹ 25 ಅಧಿಕಾರಿ ಮತ್ತು ಸಿಬ್ಬಂದಿಗೆ ಪ್ರತಿ ವರ್ಷ ಚಿನ್ನದ ಪದಕ ನೀಡಲು ತೀರ್ಮಾನಿಸಿ 2017 ರಲ್ಲೇ ಆದೇಶ ಹೊರಡಿಸಲಾಗಿತ್ತು. ಆದರೆ, ಈ ಆದೇಶ ಸರಿಯಾಗಿ ಪಾಲಿಸದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ವನ್ಯಜೀವಿ ಸಂರಕ್ಷಣವಾದಿ ಗಿರಿಧರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.