<p><strong>ಬಾಗಲಕೋಟೆ: </strong>ಕಥೆಗಾರ ಪ್ರೊ.ಅಬ್ಬಾಸ್ ಮೇಲಿನಮನಿ (66) ಹೃದಯಾಘಾತದಿಂದ ಚಿತ್ರದುರ್ಗದ ಪುತ್ರಿಯ ನಿವಾಸದಲ್ಲಿಸೋಮವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಇಳಕಲ್ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಅಬ್ಬಾಸ್, ಕಥೆಗಾರರಾಗಿ ನಾಡಿನ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿದ್ದರು.</p>.<p>ಕೃಷ್ಣಾ ತೀರದ ಜನರ ಬದುಕು, ಸಾಮಾಜಿಕ, ಸಾಂಸ್ಕೃತಿಕ ವೈಶಿಷ್ಟ್ಯ, ವೈರುಧ್ಯ ಹಾಗೂ ತಲ್ಲಣಗಳನ್ನು ತಮ್ಮ ಕಥೆಗಳಲ್ಲಿ ಬಹು ಸೂಕ್ಷ್ಮವಾಗಿ ಕಟ್ಟಿಕೊಡುತ್ತಿದ್ದ ಅಬ್ಬಾಸ ಮೇಲಿನಮನಿ, ಅಪಾರ ಶಿಷ್ಯ ಬಳಗವನ್ನು ಹೊಂದಿದ್ದಾರೆ.</p>.<p>ಇಲ್ಲಿಯವರೆಗೆ ಒಂಬತ್ತು ಕಥಾ ಸಂಕಲನ, ಮೂರು ಕವನ ಸಂಕಲನ, ಮೂರು ಕಥಾ ಸಂಪುಟ, ಒಂದು ಕಾದಂಬರಿ, ಮೂರು ಲೇಖನಗಳ ಸಂಗ್ರಹ ಹಾಗೂ ಒಂಬತ್ತು ಸಂಪಾದಿತ ಕೃತಿಗಳನ್ನು ಅವರು ರಚಿಸಿದ್ದಾರೆ.</p>.<p>ಮಾಸ್ತಿ ಕಥಾ ಪ್ರಶಸ್ತಿ, ಡಾ.ಗೊರೂರು ಸಾಹಿತ್ಯ ಪ್ರಶಸ್ತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳು ಸೇರಿದಂತೆ ಹಲವು ಪ್ರಶಸ್ತಿಗಳು ಅಬ್ಬಾಸ್ ಅವರಿಗೆ ಸಂದಿವೆ.</p>.<p>‘ಪ್ರಜಾವಾಣಿ’, ‘ಸುಧಾ’, ಮತ್ತು ‘ಮಯೂರ’ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಅಬ್ಬಾಸ್ ಮೇಲಿನಮನಿ ಅವರ ಕಥೆಗಳು ಪ್ರಕಟವಾಗಿವೆ.</p>.<p><strong>ಇಂದು ಅಂತ್ಯಕ್ರಿಯೆ: </strong>ಚಿತ್ರದುರ್ಗದಿಂದ ಪಾರ್ಥೀವ ಶರೀರವನ್ನು ಇಲ್ಲಿನ ನವನಗರದ 3ನೇ ಸೆಕ್ಟರ್ನಲ್ಲಿರುವ ಮನೆಗೆ ತರಲಾಗಿದ್ದು, ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಕಥೆಗಾರ ಪ್ರೊ.ಅಬ್ಬಾಸ್ ಮೇಲಿನಮನಿ (66) ಹೃದಯಾಘಾತದಿಂದ ಚಿತ್ರದುರ್ಗದ ಪುತ್ರಿಯ ನಿವಾಸದಲ್ಲಿಸೋಮವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಇಳಕಲ್ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಅಬ್ಬಾಸ್, ಕಥೆಗಾರರಾಗಿ ನಾಡಿನ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿದ್ದರು.</p>.<p>ಕೃಷ್ಣಾ ತೀರದ ಜನರ ಬದುಕು, ಸಾಮಾಜಿಕ, ಸಾಂಸ್ಕೃತಿಕ ವೈಶಿಷ್ಟ್ಯ, ವೈರುಧ್ಯ ಹಾಗೂ ತಲ್ಲಣಗಳನ್ನು ತಮ್ಮ ಕಥೆಗಳಲ್ಲಿ ಬಹು ಸೂಕ್ಷ್ಮವಾಗಿ ಕಟ್ಟಿಕೊಡುತ್ತಿದ್ದ ಅಬ್ಬಾಸ ಮೇಲಿನಮನಿ, ಅಪಾರ ಶಿಷ್ಯ ಬಳಗವನ್ನು ಹೊಂದಿದ್ದಾರೆ.</p>.<p>ಇಲ್ಲಿಯವರೆಗೆ ಒಂಬತ್ತು ಕಥಾ ಸಂಕಲನ, ಮೂರು ಕವನ ಸಂಕಲನ, ಮೂರು ಕಥಾ ಸಂಪುಟ, ಒಂದು ಕಾದಂಬರಿ, ಮೂರು ಲೇಖನಗಳ ಸಂಗ್ರಹ ಹಾಗೂ ಒಂಬತ್ತು ಸಂಪಾದಿತ ಕೃತಿಗಳನ್ನು ಅವರು ರಚಿಸಿದ್ದಾರೆ.</p>.<p>ಮಾಸ್ತಿ ಕಥಾ ಪ್ರಶಸ್ತಿ, ಡಾ.ಗೊರೂರು ಸಾಹಿತ್ಯ ಪ್ರಶಸ್ತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳು ಸೇರಿದಂತೆ ಹಲವು ಪ್ರಶಸ್ತಿಗಳು ಅಬ್ಬಾಸ್ ಅವರಿಗೆ ಸಂದಿವೆ.</p>.<p>‘ಪ್ರಜಾವಾಣಿ’, ‘ಸುಧಾ’, ಮತ್ತು ‘ಮಯೂರ’ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಅಬ್ಬಾಸ್ ಮೇಲಿನಮನಿ ಅವರ ಕಥೆಗಳು ಪ್ರಕಟವಾಗಿವೆ.</p>.<p><strong>ಇಂದು ಅಂತ್ಯಕ್ರಿಯೆ: </strong>ಚಿತ್ರದುರ್ಗದಿಂದ ಪಾರ್ಥೀವ ಶರೀರವನ್ನು ಇಲ್ಲಿನ ನವನಗರದ 3ನೇ ಸೆಕ್ಟರ್ನಲ್ಲಿರುವ ಮನೆಗೆ ತರಲಾಗಿದ್ದು, ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>