ಬೆಂಗಳೂರು: ‘ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಇನ್ನು ಸಿನಿಮಾ ಗುಂಗಿನಿಂದ ಹೊರಬಂದಂತಿಲ್ಲ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಬಗೆಬಗೆಯ ಫೋಟೋಶೂಟ್ ಮಾಡಿಸುವುದರಲ್ಲಿ ಇರುವಷ್ಟು ಆಸಕ್ತಿ ರೈತರ ಬಗ್ಗೆ ಇಲ್ಲ’ ಎಂದು ವ್ಯಂಗ್ಯವಾಡಿದೆ.
‘ರೈತರ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗದ, ನೀಡಿದ ಖಾತೆ ನಿಭಾಯಿಸಲಾಗದ ತಮ್ಮ ಹೇಡಿತನ ಮರೆಮಾಚಲು ಬೆವರು ಹರಿಸುವ ರೈತರನ್ನೇ ಹೇಡಿಗಳೆನ್ನುವುದು ಇವರ ಖಯಾಲಿ!’ ಎಂದು ಕಿಡಿಕಾರಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ಮುಖಂಡರ ವಾಕ್ಸಮರ ದಿನದಿಂದ ದಿನಕ್ಕೆ ಜೋರಾಗುತ್ತಿದೆ.
ಸಚಿವ @bcpatilkourava ಅವರು ಇನ್ನೂ ಸಹ ಸಿನೆಮಾ ಗುಂಗಿನಿಂದ ಹೊರಬಂದಂತಿಲ್ಲ! ಬಗೆಬಗೆಯ ಫೋಟೋಶೂಟ್ನಲ್ಲಿ ಇರುವಷ್ಟು ಆಸಕ್ತಿ ರೈತರ ಬಗ್ಗೆ ಇಲ್ಲ.
ರೈತರ ಹತ್ತು ಹಲವು ಸಮಸ್ಯೆಗಳನ್ನು ಬಗೆಹರಿಸಲಾಗದ, ನೀಡಿದ ಖಾತೆ ನಿಭಾಯಿಸಲಾಗದ ತಮ್ಮ ಹೇಡಿತನ ಮರೆಮಾಚಲು ಬೆವರು ಹರಿಸುವ ರೈತರನ್ನೇ ಹೇಡಿಗಳೆನ್ನುವುದು ಇವರ ಖಯಾಲಿ!#ಬಿಜೆಪಿಯಅಸಮರ್ಥರುpic.twitter.com/eKVwJ2S4Gj
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.