‘ಇಬ್ಬರು ಮಹಿಳೆಯರು ಸಾವಿಗೆ ಮತ್ತು ಜನರು ಅಸ್ವಸ್ಥಗೊಳ್ಳಲು ಕಲುಷಿತ ನೀರು ಕುಡಿದಿದ್ದೇ ಕಾರಣ ಎಂಬ ಶಂಕೆಯಿದೆ. ಗ್ರಾಮದ ಕರೆಮ್ಮ ದೇವಸ್ಥಾನ, ಚೌಡಕಟ್ಟಿ ಓಣಿಯಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಸೋರಿಕೆಯಿಂದ ನೀರು ಕಲುಷಿತ ಆಗಿರಬಹುದು. ಗ್ರಾಮದ ನೀರಿನ ಟ್ಯಾಂಕ್, ಕೊಳವೆಬಾವಿಯ ನೀರಿನ ಗುಣಮಟ್ಟ ಪರಿಶೀಲಿಸಲು ಅದನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಗುರುರಾಜ ಹಿರೇಗೌಡರ್ ತಿಳಿಸಿದರು.