‘ಲಾಭ ಪಡೆಯುವ ವ್ಯವಹಾರ ಅಲ್ಲ’
‘ಪಂಚಾಯಿತಿ ಸದಸ್ಯ ಸ್ಥಾನ ಎಂದರೆ ಹಣ, ಅಧಿಕಾರ ಅಲ್ಲ ಬದಲಿಗೆ ಸಮಾಜ ಸೇವೆ ಎಂಬ ಭಾವನೆ ಮೊದಲಿನಿಂದಲೂ ನಮ್ಮೂರಿನಲ್ಲಿ ಮೂಡಿಸಿದ್ದೇವೆ. ಯಾರಿಗೂ ಒತ್ತಾಯಿಸುವುದಿಲ್ಲ, ಮನವೊಲಿಸುತ್ತೇವೆ. ಅವಿರೋಧ ಆಯ್ಕೆ ಸಂಪ್ರದಾಯ ಮುಂದುವರೆಸಲು ಸಾಧ್ಯವಾಗಿದೆ’ ಎಂದು ವನ್ಯಜೀವಿ ತಜ್ಞ ಡಾ.ಎಂ.ಆರ್. ದೇಸಾಯಿ ಹೇಳುತ್ತಾರೆ.