ಉಡುಪಿ ಜಿಲ್ಲೆಯ ಕಾರ್ಕಾಳ ತಾಲೂಕಿನವರಾಗಿರುವ ಮುದ್ರಾಡಿ ಅವರು ಹತ್ತಾರು ಮೌಲಿಕ ಗ್ರಂಥಗಳನ್ನು ಸಂಪಾದನೆ ಮಾಡಿದ್ದಾರೆ. ಹರಿದಾಸ, ಜಿನದಾಸ, ಏಸು ದಾಸ, ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಛಾಫು ಮೂಡಿಸಿದ್ದರು. ಹಲವು ಯಕ್ಷಗಾನ ಪ್ರಸಂಗಗಳ ಕರ್ತೃ ಆಗಿರುವ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.