<p><strong>ಮೂಡುಬಿದಿರೆ:</strong> ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಗುರುವಾರ ಮುಂಜಾನೆ ನಡೆದ ಅಪಘಾತವೊಂದರಲ್ಲಿ ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಅವರು ಸಾವನ್ನಪ್ಪಿದ್ದಾರೆ.</p>.<p>ಆಟ ಮುಗಿಸಿ ಅವರು ಬರುತ್ತಿದ್ದ ಬೈಕು ಹಾಗೂ ಎದುರಿನಿಂದ ಬರುತ್ತಿದ್ದ ಓಮ್ನಿ ವ್ಯಾನ್ ಪರಸ್ಪರ ಡಿಕ್ಕಿಯಾಗಿದ್ದು, ವಾಮನಕುಮಾರ್ ದುರಂತ ಸಾವಿಗೀಡಾಗಿದ್ದಾರೆ. ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧುಗಳನ್ನು, ಯಕ್ಷಗಾನ ಅಭಿಮಾನಿಗಳನ್ನು ಅಗಲಿದ್ದಾರೆ.</p>.<p>ಸುಮಾರು 30 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಕಲಾವಿದರಾಗಿರುವ ಅವರು, ಪುಂಡು ವೇಷ, ಸ್ತ್ರೀವೇಷಗಳಲ್ಲಿ ಖ್ಯಾತಿ ಗಳಿಸಿದ್ದರು.</p>.<p>ವೇಣೂರು ಗ್ರಾಮದ ಗೋಳಿತ್ಯಾರಿನ ದಿ.ಅಣ್ಣು ದೇವಾಡಿಗ ಮತ್ತು ಮೋನಮ್ಮ ದಂಪತಿಯ ಪುತ್ರನಾಗಿರುವ ಅವರು ಇತ್ತೀಚೆಗಷ್ಟೇ ತಮ್ಮ ಅಕ್ಕನನ್ನು ಕಳೆದಕೊಂಡಿದ್ದರು. 8ನೇ ತರಗತಿಗೇ ವಿದ್ಯಾಭ್ಯಾಸ ಮೊಟಕುಗೊಳಿಸಿ ಯಕ್ಷಗಾನ ರಂಗಕ್ಕೆ ಬಂದಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಅವರಲ್ಲಿ ಯಕ್ಷಗಾನ ಅಭ್ಯಾಸ ಮಾಡಿ, ರಂಗಕ್ಕೇರಿದ್ದರು..</p>.<p>ಧರ್ಮಸ್ಥಳ ಮೇಳದಲ್ಲಿ 2 ವರ್ಷ, ಕದ್ರಿ ಮೇಳದಲ್ಲಿ 4 ವರ್ಷ ಹಾಗೂ ಪಿ.ಕಿಶನ್ ಹೆಗ್ಡೆ ನೇತೃತ್ವದ ಮಂಗಳಾದೇವಿ ಮೇಳದಲ್ಲಿ 15ಕ್ಕೂ ಹೆಚ್ಚು ವರ್ಷ ದುಡಿದಿರುವ ಅವರು, ಹತ್ತಕ್ಕೂ ಹೆಚ್ಚು ವರ್ಷಗಳಿಂದ ಹಿರಿಯಡ್ಕ ಮೇಳದಲ್ಲಿ ದುಡಿಯುತ್ತಿದ್ದರು.</p>.<p>ಪ್ರಮೀಳೆ, ಭ್ರಮರ ಕುಂತಳೆ, ಮಾಲಿನಿ, ಪ್ರಭಾವತಿ, ಪದ್ಮಾವತಿ, ಕಿನ್ನಿದಾರು, ದುರ್ಮುಖಿ ಮುಂತಾದ ಸ್ತ್ರೀಪಾತ್ರಗಳಲ್ಲದೆ, ಕೃಷ್ಣ, ಕುಶ-ಲವ, ಚಂಡ-ಮುಂಡ, ಕೋಟಿ-ಚೆನ್ನಯ, ಕಾಂತಬಾರೆ-ಬುದಬಾರೆ, ಸುದರ್ಶನ, ಭಾರ್ಗವ ಮುಂತಾದ ಅಬ್ಬರದ ಪುಂಡುವೇಷಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಮಸ್ಕತ್ ಸಹಿತ ವಿವಿಧೆಡೆ ಇವರ ಕಲಾಪ್ರತಿಭೆಗೆ ಸನ್ಮಾನವೂ ಸಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಗುರುವಾರ ಮುಂಜಾನೆ ನಡೆದ ಅಪಘಾತವೊಂದರಲ್ಲಿ ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಅವರು ಸಾವನ್ನಪ್ಪಿದ್ದಾರೆ.</p>.<p>ಆಟ ಮುಗಿಸಿ ಅವರು ಬರುತ್ತಿದ್ದ ಬೈಕು ಹಾಗೂ ಎದುರಿನಿಂದ ಬರುತ್ತಿದ್ದ ಓಮ್ನಿ ವ್ಯಾನ್ ಪರಸ್ಪರ ಡಿಕ್ಕಿಯಾಗಿದ್ದು, ವಾಮನಕುಮಾರ್ ದುರಂತ ಸಾವಿಗೀಡಾಗಿದ್ದಾರೆ. ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧುಗಳನ್ನು, ಯಕ್ಷಗಾನ ಅಭಿಮಾನಿಗಳನ್ನು ಅಗಲಿದ್ದಾರೆ.</p>.<p>ಸುಮಾರು 30 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಕಲಾವಿದರಾಗಿರುವ ಅವರು, ಪುಂಡು ವೇಷ, ಸ್ತ್ರೀವೇಷಗಳಲ್ಲಿ ಖ್ಯಾತಿ ಗಳಿಸಿದ್ದರು.</p>.<p>ವೇಣೂರು ಗ್ರಾಮದ ಗೋಳಿತ್ಯಾರಿನ ದಿ.ಅಣ್ಣು ದೇವಾಡಿಗ ಮತ್ತು ಮೋನಮ್ಮ ದಂಪತಿಯ ಪುತ್ರನಾಗಿರುವ ಅವರು ಇತ್ತೀಚೆಗಷ್ಟೇ ತಮ್ಮ ಅಕ್ಕನನ್ನು ಕಳೆದಕೊಂಡಿದ್ದರು. 8ನೇ ತರಗತಿಗೇ ವಿದ್ಯಾಭ್ಯಾಸ ಮೊಟಕುಗೊಳಿಸಿ ಯಕ್ಷಗಾನ ರಂಗಕ್ಕೆ ಬಂದಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಅವರಲ್ಲಿ ಯಕ್ಷಗಾನ ಅಭ್ಯಾಸ ಮಾಡಿ, ರಂಗಕ್ಕೇರಿದ್ದರು..</p>.<p>ಧರ್ಮಸ್ಥಳ ಮೇಳದಲ್ಲಿ 2 ವರ್ಷ, ಕದ್ರಿ ಮೇಳದಲ್ಲಿ 4 ವರ್ಷ ಹಾಗೂ ಪಿ.ಕಿಶನ್ ಹೆಗ್ಡೆ ನೇತೃತ್ವದ ಮಂಗಳಾದೇವಿ ಮೇಳದಲ್ಲಿ 15ಕ್ಕೂ ಹೆಚ್ಚು ವರ್ಷ ದುಡಿದಿರುವ ಅವರು, ಹತ್ತಕ್ಕೂ ಹೆಚ್ಚು ವರ್ಷಗಳಿಂದ ಹಿರಿಯಡ್ಕ ಮೇಳದಲ್ಲಿ ದುಡಿಯುತ್ತಿದ್ದರು.</p>.<p>ಪ್ರಮೀಳೆ, ಭ್ರಮರ ಕುಂತಳೆ, ಮಾಲಿನಿ, ಪ್ರಭಾವತಿ, ಪದ್ಮಾವತಿ, ಕಿನ್ನಿದಾರು, ದುರ್ಮುಖಿ ಮುಂತಾದ ಸ್ತ್ರೀಪಾತ್ರಗಳಲ್ಲದೆ, ಕೃಷ್ಣ, ಕುಶ-ಲವ, ಚಂಡ-ಮುಂಡ, ಕೋಟಿ-ಚೆನ್ನಯ, ಕಾಂತಬಾರೆ-ಬುದಬಾರೆ, ಸುದರ್ಶನ, ಭಾರ್ಗವ ಮುಂತಾದ ಅಬ್ಬರದ ಪುಂಡುವೇಷಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಮಸ್ಕತ್ ಸಹಿತ ವಿವಿಧೆಡೆ ಇವರ ಕಲಾಪ್ರತಿಭೆಗೆ ಸನ್ಮಾನವೂ ಸಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>