ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವನಾಥ್ ಹೇಳಿಕೆಗೆ ನಾರಾಯಣಸ್ವಾಮಿ ಆಕ್ಷೇಪ

Last Updated 5 ಡಿಸೆಂಬರ್ 2020, 16:34 IST
ಅಕ್ಷರ ಗಾತ್ರ

ಬೆಂಗಳೂರು: ‘ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಖರ್ಚಿಗೆ ಒದಗಿಸಿದ್ದ ಹಣವನ್ನು ಕೆಲವರು ಲಪಟಾಯಿಸಿದರು ಎಂಬ ಎಚ್. ವಿಶ್ವನಾಥ್ ಅವರ ಹೇಳಿಕೆ ಆಘಾತ ಉಂಟುಮಾಡಿದೆ’ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.

‘ಸಂಸದರಾಗಿ, ಶಾಸಕರಾಗಿ, ಸಚಿವರಾಗಿ, ಪ್ರಾದೇಶಿಕ ಪಕ್ಷವೊಂದರ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಅವರೇ ಹೀಗೆ ಬೇಜವಾಬ್ದಾರಿತನದಿಂದ ಹೇಳಿಕೆ ನೀಡಿರುವುದನ್ನು ನಾನು ಖಂಡಿಸುತ್ತೇನೆ. ಬಿಜೆಪಿಯ ಸಂಸ್ಕಾರ, ಸಂಸ್ಕೃತಿ ಬೇರೆಯೇ ಇದೆ. ಇಂತಹ ಯಾವ ಗುಪ್ತ ವ್ಯವಹಾರಗಳು ಬಿಜೆಪಿಯಲ್ಲಿ ನಡೆಯುವುದಿಲ್ಲ’ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

‘ವಿಶ್ವನಾಥ್ ಅವರ ಇಂತಹ ಹೇಳಿಕೆಗಳು ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಅವರ ಅಸಮಾಧಾನಗಳು, ನಿರೀಕ್ಷೆಗಳು ಏನೇ ಇರಲಿ, ಪಕ್ಷದ ವೇದಿಕೆಗಳಲ್ಲಿಯೇ ಅದನ್ನು ವ್ಯಕ್ತಪಡಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT