ರಾಜ್ಯದಲ್ಲಿ ಆಗಸ್ಟ್ನಿಂದ ಸೆಪ್ಟೆಂಬರ್ 15 ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಿಂದ ₹9,441 ಕೋಟಿ ಹಾನಿಯಾಗಿದೆ. ಸೆಪ್ಟೆಂಬರ್ 15 ರ ಬಳಿಕ ಮಳೆ ಮತ್ತು ಪ್ರವಾಹದಿಂದ ₹5,668 ಕೋಟಿ ನಷ್ಟವಾಗಿದೆ. ಅಕ್ಟೋಬರ್ ಮೊದಲ ವಾರದಿಂದ ಕರಾವಳಿ, ಉತ್ತರಕರ್ನಾಟಕದ ಭಾಗದಲ್ಲಿ ಮಳೆ, ಪ್ರವಾಹದಿಂದ ₹6,500 ಕೋಟಿಯಷ್ಟು ನಷ್ಟ ಆಗಿದೆ. ಈ ಮೂರೂ ತಿಂಗಳ ಅವಧಿಯಲ್ಲಿ 30 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 6 ಲಕ್ಷ ಹೆಕ್ಟೇರ್ನಲ್ಲಿದ್ದ ಬೆಳೆ ನಷ್ಟವಾಗಿದೆ. ರಸ್ತೆ, ಸೇತುವೆ, ಶಾಲಾ, ಅಂಗನವಾಡಿ ಕಟ್ಟಡಗಳು, ವಿದ್ಯುತ್ ಸಂಪರ್ಕದ ಮೂಲ ಸೌಕರ್ಯಗಳಿಗೂ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.