<p><strong>ನವದೆಹಲಿ: </strong>ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಕುರಿತು ನಾಲ್ಕು ದಿನಗಳಲ್ಲಿ ಅಂತಿಮ ನಿರ್ಧಾರ ತಿಳಿಸುವುದಾಗಿ ಬಿಜೆಪಿ ಹೈಕಮಾಂಡ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿಸಿದೆ.</p>.<p>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಬುಧವಾರ ಸಂಜೆ ಈ ಕುರಿತು ನಡೆಸಲಾದ ಸಭೆಯ ಬಳಿಕ ಮಾತನಾಡಿದ ಯಡಿಯೂರಪ್ಪ, ನಾಲ್ಕೈದು ದಿನಗಳಲ್ಲಿನಡ್ಡಾ ಅವರು ಈ ಸಂಬಂಧ ನಿರ್ಧಾರ ತಿಳಿಸುವುದಾಗಿ ಹೇಳಿದರು.</p>.<p>ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರ ಜೊತೆ ಮಾತುಕತೆ ನಡೆಸಿದ ಬಳಿಕ ಸಂಪುಟಕ್ಕೆ ಸೇರ್ಪಡೆ ಆಗುವವರ ಪಟ್ಟಿಯನ್ನು ಕಳುಹಿಸಿಕೊಡುವುದಾಗಿ ನಡ್ಡಾ ತಿಳಿಸಿದ್ದಾರೆ ಎಂದು ಅವರು ಹೇಳಿದರು.</p>.<p>ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಯಡಿಯೂರಪ್ಪ ಪ್ರಯತ್ನಿಸಿದರಾದರೂ ಅವಕಾಶ ಸಿಗಲಿಲ್ಲ ಎನ್ನಲಾಗಿದೆ.</p>.<p>ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಡಿಯೂರಪ್ಪ ಒಲವು ತೋರಿದ್ದು, ಹೈಕಮಾಂಡ್ ಅದಕ್ಕೆ ಒಲವು ತೋರಿಲ್ಲ ಎನ್ನಲಾಗಿದೆ.</p>.<p>ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಯಲ್ಲಿದ್ದರೂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಕುರಿತು ನಾಲ್ಕು ದಿನಗಳಲ್ಲಿ ಅಂತಿಮ ನಿರ್ಧಾರ ತಿಳಿಸುವುದಾಗಿ ಬಿಜೆಪಿ ಹೈಕಮಾಂಡ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿಸಿದೆ.</p>.<p>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಬುಧವಾರ ಸಂಜೆ ಈ ಕುರಿತು ನಡೆಸಲಾದ ಸಭೆಯ ಬಳಿಕ ಮಾತನಾಡಿದ ಯಡಿಯೂರಪ್ಪ, ನಾಲ್ಕೈದು ದಿನಗಳಲ್ಲಿನಡ್ಡಾ ಅವರು ಈ ಸಂಬಂಧ ನಿರ್ಧಾರ ತಿಳಿಸುವುದಾಗಿ ಹೇಳಿದರು.</p>.<p>ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರ ಜೊತೆ ಮಾತುಕತೆ ನಡೆಸಿದ ಬಳಿಕ ಸಂಪುಟಕ್ಕೆ ಸೇರ್ಪಡೆ ಆಗುವವರ ಪಟ್ಟಿಯನ್ನು ಕಳುಹಿಸಿಕೊಡುವುದಾಗಿ ನಡ್ಡಾ ತಿಳಿಸಿದ್ದಾರೆ ಎಂದು ಅವರು ಹೇಳಿದರು.</p>.<p>ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಯಡಿಯೂರಪ್ಪ ಪ್ರಯತ್ನಿಸಿದರಾದರೂ ಅವಕಾಶ ಸಿಗಲಿಲ್ಲ ಎನ್ನಲಾಗಿದೆ.</p>.<p>ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಡಿಯೂರಪ್ಪ ಒಲವು ತೋರಿದ್ದು, ಹೈಕಮಾಂಡ್ ಅದಕ್ಕೆ ಒಲವು ತೋರಿಲ್ಲ ಎನ್ನಲಾಗಿದೆ.</p>.<p>ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಯಲ್ಲಿದ್ದರೂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>