ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನಿರತ್ನಗಿಲ್ಲ ಸಚಿವ ಸ್ಥಾನ, 7 ನೂತನ ಸಚಿವರ ಪಟ್ಟಿ ಪ್ರಕಟಿಸಿದ ಯಡಿಯೂರಪ್ಪ

Last Updated 13 ಜನವರಿ 2021, 10:10 IST
ಅಕ್ಷರ ಗಾತ್ರ

ಬೆಂಗಳೂರು: ಇಂದು ಸಂಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ 7 ಶಾಸಕರ ಹೆಸರನ್ನು ಮುಖ್ಯಮಂತ್ರಿಯಡಿಯೂರಪ್ಪ ಪ್ರಕಟಿಸಿದ್ದಾರೆ.

ಉಮೇಶ್ ಕತ್ತಿ, ಎಸ್. ಅಂಗಾರ, ಸಿ.ಪಿ. ಯೋಗೀಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ ಅವರ ಹೆಸರುಗಳನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮಗಳಿಗೆ ಮುಖ್ಯಮಂತ್ರಿಯಡಿಯೂರಪ್ಪ ತಿಳಿಸಿದ್ದಾರೆ.

ಉಪಚುನಾವಣಾ ಪ್ರಚಾರದಲ್ಲಿ ಮುನಿರತ್ನ ಮುಂದಿನ ಮಂತ್ರಿ ಎಂದು ಪ್ರಚಾರ ಮಾಡಿದ್ದ ಸಿಎಂ ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿಯಿಂದ ಅವರ ಹೆಸರನ್ನು ಕೈಬಿಟ್ಟಿದ್ದಾರೆ. ಮುನಿರತ್ನಗೆ ಸಚಿವ ಸ್ಥಾನದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಯಾವುದೇ ಉತ್ತರ ಕೊಡದೆ ಯಡಿಯೂರಪ್ಪ ಮುಂದೆ ನಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT